ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯ: ದಸಂಸದಿಂದ 6ರಂದು ಪ್ರತಿಭಟನೆ

Last Updated 4 ಮಾರ್ಚ್ 2021, 4:05 IST
ಅಕ್ಷರ ಗಾತ್ರ

ಬೆಂಗಳೂರು: ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯು ಇದೇ 6ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

‘ಹಿಂದುಳಿದ ಪರಿಶಿಷ್ಟ ಉಪ ಜಾತಿಗಳಿಗೆ ಸೌಲಭ್ಯ ಒದಗಿಸುವ ಉದ್ದೇಶದಿಂದ ಮಾದಿಗ, ಬೋವಿ, ಕೊರಮ, ಕೊರಚರಿಗೆ ಹಾಗೂ ಇತರರಿಗೆ ಒಟ್ಟು ಶೇ 15ರಷ್ಟು ಮೀಸಲಾತಿ ಸೌಲಭ್ಯ ನೀಡುವಂತೆ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಇದನ್ನು ಅನುಷ್ಠಾನಕ್ಕೆ ತರಬೇಕು’ ಎಂದು ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಡಾ.ಎ.ಎನ್. ಮೂರ್ತಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

‘2012 ಜೂನ್ 14ರಂದು ಆಯೋಗವು ತನ್ನ ವರದಿಯಲ್ಲಿ ಈ ಶಿಫಾರಸು ಮಾಡಿ ಸರ್ಕಾರಕ್ಕೆ ಕಳುಹಿಸಿದೆ. ಆದರೆ, ಈವರೆಗೆ ರಾಜ್ಯ ಸರ್ಕಾರವು ವರದಿಯನ್ನು ಜಾರಿಗೆ ತರದೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ’ ಎಂದು ಅವರು ದೂರಿದರು.

‘ನಗರದ ಮೈಸೂರು ಬ್ಯಾಂಕ್ ವೃತ್ತದಿಂದ ಮುಖ್ಯಮಂತ್ರಿಯವರ ನಿವಾಸದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT