‘ಹಿಂದುಳಿದ ಪರಿಶಿಷ್ಟ ಉಪ ಜಾತಿಗಳಿಗೆ ಸೌಲಭ್ಯ ಒದಗಿಸುವ ಉದ್ದೇಶದಿಂದ ಮಾದಿಗ, ಬೋವಿ, ಕೊರಮ, ಕೊರಚರಿಗೆ ಹಾಗೂ ಇತರರಿಗೆ ಒಟ್ಟು ಶೇ 15ರಷ್ಟು ಮೀಸಲಾತಿ ಸೌಲಭ್ಯ ನೀಡುವಂತೆ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಇದನ್ನು ಅನುಷ್ಠಾನಕ್ಕೆ ತರಬೇಕು’ ಎಂದು ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಡಾ.ಎ.ಎನ್. ಮೂರ್ತಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.