ತಕ್ಷಣವೇ ಸ್ಥಳಕ್ಕೆ ಬಂದ ರೈತರು ನೀರು ಕುಡಿಯದಂತೆ ಎಚ್ಚರಿಸಿದ್ದಾರೆ, ಆದರೆ, ಆ ವೇಳೆಗಾಗಲೇ 15 ಮಂದಿ ನೀರು ಕುಡಿದಿದ್ದರು. ನಂತರ ವಾಂತಿ ಮಾಡಿಕೊಂಡ ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ತಕ್ಷಣವೇ ಆಂಬುಲೆನ್ಸ್ ಕರೆಸಿ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.