ಫ್ರೇಜರ್ಟೌನ್, ಪುಲಿಕೇಶಿನಗರ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಹಲವು ಮನೆಗಳಿಗೆ ತೆರಳಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಸಂಬಂಧಿಕರು, ಸ್ನೇಹಿತರು ಹಾಗೂ ಪಕ್ಷದ ಕಾರ್ಯಕರ್ತರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.
ಸಿಸಿಬಿ ಎಸಿಪಿ ಹಾಗೂ ಇನ್ಸ್ಪೆಕ್ಟರ್ ಜೊತೆ ಗುರುವಾರ ಸಭೆ ನಡೆಸಿದ ಜಂಟಿ ಕಮಿಷನರ್ ಸಂದೀಪ್ ಪಾಟೀಲ, ಸಂಪತ್ ರಾಜ್ ಬಗ್ಗೆ ಸಿಕ್ಕ ಮಾಹಿತಿಯನ್ನು ಪರಿಶೀಲಿಸಿ ಕೆಲ ಸೂಚನೆಗಳನ್ನು ನೀಡಿದರು.