ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಜೆ ಹಳ್ಳಿ ಗಲಭೆ ಪ್ರಕರಣ| ಸಂಪತ್‌ ರಾಜ್‌ಗಾಗಿ ತೀವ್ರಗೊಂಡ ಹುಡುಕಾಟ

Last Updated 5 ನವೆಂಬರ್ 2020, 19:02 IST
ಅಕ್ಷರ ಗಾತ್ರ

ಬೆಂಗಳೂರು: ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿರುವ ಕಾಂಗ್ರೆಸ್ ಮುಖಂಡ ಆರ್. ಸಂಪತ್‌ ರಾಜ್ ಅವರಿಗಾಗಿ ಹುಡುಕಾಟ ತೀವ್ರಗೊಂಡಿದ್ದು, ಅವರು ನಗರದಲ್ಲೇ ಅವಿತುಕೊಂಡಿರುವ ಮಾಹಿತಿ ಸಿಸಿಬಿಗೆ ಸಿಕ್ಕಿದೆ.

‘ಶೀಘ್ರವೇ ಸಂಪತ್‌ ರಾಜ್‌ ಬಂಧನವಾಗಲಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಬುಧವಾರವಷ್ಟೇ ಹೇಳಿಕೆ ನೀಡಿದ್ದು, ಅದರ ಬೆನ್ನಲ್ಲೇ ಸಿಸಿಬಿ ಪೊಲೀಸರ ವಿಶೇಷ ತಂಡಗಳು ಹುಡುಕಾಟ ಚುರುಕುಗೊಳಿಸಿವೆ.

ಫ್ರೇಜರ್‌ಟೌನ್, ಪುಲಿಕೇಶಿನಗರ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಹಲವು ಮನೆಗಳಿಗೆ ತೆರಳಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಸಂಬಂಧಿಕರು, ಸ್ನೇಹಿತರು ಹಾಗೂ ಪಕ್ಷದ ಕಾರ್ಯಕರ್ತರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.
ಸಿಸಿಬಿ ಎಸಿಪಿ ಹಾಗೂ ಇನ್‌ಸ್ಪೆಕ್ಟರ್‌ ಜೊತೆ ಗುರುವಾರ ಸಭೆ ನಡೆಸಿದ ಜಂಟಿ ಕಮಿಷನರ್ ಸಂದೀಪ್ ಪಾಟೀಲ, ಸಂಪತ್‌ ರಾಜ್‌ ಬಗ್ಗೆ ಸಿಕ್ಕ ಮಾಹಿತಿಯನ್ನು ಪರಿಶೀಲಿಸಿ ಕೆಲ ಸೂಚನೆಗಳನ್ನು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT