ಜನರಿಗೆ ನೀರು ಒದಗಿಸುವುದು ಸರ್ಕಾರದ ಕರ್ತವ್ಯ. ಈ ವಿಚಾರದಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಿದೆ. ನೀರಿನ ದುರ್ಬಳಕೆ ತಡೆಗೆ ಕಠಿಣವಾದ ಕ್ರಮಗಳನ್ನು ಕೈಗೊಳ್ಳಬೇಕು. ಕಾಲುವೆಗಳಲ್ಲಿ ಹರಿಸುವ ನೀರು ಮತ್ತು ಅಂತಿಮವಾಗಿ ತಲುಪುವ ನೀರಿನ ಪ್ರಮಾಣದ ನಡುವೆ ಭಾರಿ ವ್ಯತ್ಯಾಸವಿದೆ. ಅದನ್ನು ತಗ್ಗಿಸಲು ಕಾಲುವೆಗಳ ಗುಣಮಟ್ಟ ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.