<p><strong>ಬೆಂಗಳೂರು: </strong>ಡ್ರಗ್ಸ್ ಜಾಲ ಪ್ರಕರಣದಲ್ಲಿ ಸೆರೆಸಿಕ್ಕಿರುವ ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ (25), ಕೇವಲ ಎರಡೇ ಜಾಲತಾಣಗಳನ್ನು ಹ್ಯಾಕ್ ಮಾಡಿ ₹ 19 ಕೋಟಿ ಗಳಿಸಿದ್ದನೆಂಬ ಸಂಗತಿ ಸಿಐಡಿ ಸೈಬರ್ ಪೊಲೀಸರ ತನಿಖೆಯಿಂದ ಬಯಲಾಗಿದೆ.</p>.<p>ಡ್ರಗ್ಸ್ ಜಾಲದ ಆರೋಪಿಗಳು ಸೈಬರ್ ವಂಚನೆಯಲ್ಲೂ ಶಾಮೀಲಾಗಿದ್ದಾರೆ. ಇದರಲ್ಲಿ ರಾಜಕೀಯ ಮುಖಂಡರು, ಉದ್ಯಮಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ಮಕ್ಕಳೂ ಭಾಗಿಯಾಗಿರುವ ಸಂಗತಿ ಹೊರಬಿದ್ದಿದೆ.</p>.<p>ಡಾರ್ಕ್ನೆಟ್ ಮೂಲಕ ಡ್ರಗ್ಸ್ ತರಿಸಿಕೊಂಡು ಮಾರಾಟ ಮಾಡುತ್ತಿದ್ದ ಆರೋಪದಡಿ ಎಂ. ಸುಜಯ್ನನ್ನು ಬಂಧಿಸಲಾಗಿತ್ತು. ಕೆಂಪೇಗೌಡ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ತನಿಖೆ ಕೈಗೊಂಡಿದ್ದ ಪೊಲೀಸರು, ಆರೋಪಿಗಳಾದ ಹೇಮಂತ್ ಮುದ್ದಪ್ಪ, ಸುನೀಶ್ ಹೆಗ್ಡೆ, ಪ್ರಸಿದ್ ಶೆಟ್ಟಿ, ಕಾಂಗ್ರೆಸ್ ಮುಖಂಡ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಸೇರಿದಂತೆ 7 ಮಂದಿಯನ್ನು ಬಂಧಿಸಿದ್ದರು. ಡ್ರಗ್ಸ್ ಖರೀದಿಗಾಗಿ ಆರೋಪಿಗಳಿಗೆ ಬಿಟ್ ಕಾಯಿನ್ ನೀಡುತ್ತಿದ್ದ ಆರೋಪದಡಿ ಶ್ರೀಕೃಷ್ಣನನ್ನು ಸೆರೆ ಹಿಡಿದಿದ್ದರು.</p>.<p class="Subhead">ರಾಜ್ಯ ಸರ್ಕಾರದ ಇ–ಪ್ರೊಕ್ಯೂರ್ಮೆಂಟ್ ಜಾಲತಾಣವನ್ನು 2019ರಲ್ಲಿ ಹ್ಯಾಕ್ ಮಾಡಿರುವ ಬಗ್ಗೆ ಸಿಐಡಿ ಸೈಬರ್ ಕ್ರೈಂ ವಿಭಾಗದಲ್ಲಿ ಪ್ರಕರಣ ದಾಖಲಾಗಿತ್ತು. ಇದರಲ್ಲೂ ಶ್ರೀಕೃಷ್ಣ ಭಾಗಿಯಾಗಿದ್ದು ತನಿಖೆಯಿಂದ ಗೊತ್ತಾಗಿತ್ತು.</p>.<p>ಶ್ರೀಕೃಷ್ಣ, ಸುನೀಶ್ ಹೆಗ್ಡೆ, ಪ್ರಸಿದ್ಧ್ ಶೆಟ್ಟಿಯನ್ನು ಸಿಐಡಿ ಪೊಲೀಸರು ವಿಚಾರಣೆ ನಡೆಸಿದಾಗ ಈ ಮಾಹಿತಿ ಗೊತ್ತಾಗಿದೆ.</p>.<p>‘ಜಯನಗರದ ಶ್ರೀಕೃಷ್ಣ, ನೆದರ್ಲ್ಯಾಂಡ್ನಲ್ಲಿ ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್) ಮುಗಿಸಿ ಬೆಂಗಳೂರಿಗೆ ವಾಪಸ್ ಬಂದು ಜಾಲತಾಣ ಹಾಗೂ ಸಾಮಾಜಿಕ ಜಾಲತಾಣ ಹ್ಯಾಕ್ ಮಾಡಲಾರಂಭಿಸಿದ್ದ. ಅದರಿಂದ ಕೋಟ್ಯಂತರ ರೂಪಾಯಿ ಸಂಪಾದಿಸಿದ್ದಾನೆ’ ಎಂದು ಸಿಐಡಿ ಮೂಲಗಳು ತಿಳಿಸಿವೆ.</p>.<p>‘ಇ–ಪ್ರೊಕ್ಯೂರ್ಮೆಂಟ್ ಹಾಗೂ ಖಾಸಗಿ ಕಂಪನಿಯೊಂದರ ಜಾಲತಾಣ ಹ್ಯಾಕ್ ಮಾಡಿದ್ದ ಶ್ರೀಕೃಷ್ಣ, ₹ 19 ಕೋಟಿ ಲಪಟಾಯಿಸಿದ್ದ. ಇದೇ ರೀತಿಯಲ್ಲಿ ಸಾಕಷ್ಟು ಜಾಲತಾಣಗಳನ್ನು ಹ್ಯಾಕ್ ಮಾಡಿ ಹಣ ಸಂಪಾದಿಸಿದ್ದಾನೆ. ಹಣ ಎಲ್ಲಿದೆ ಎಂಬುದನ್ನು ತಿಳಿಯಬೇಕಿದೆ’ ಎಂದೂ ಮೂಲಗಳು ಹೇಳಿವೆ.</p>.<p class="Subhead">ಶ್ರೀಕೃಷ್ಣನ ಹಣಕಾಸು ವ್ಯವಹಾರವನ್ನು ಸ್ನೇಹಿತ ರಾಬಿನ್ ನೋಡಿಕೊಳ್ಳುತ್ತಿದ್ದ. ಸಿಸಿಬಿ ವಶದಲ್ಲಿರುವ ಆತನನ್ನು ಕಸ್ಟಡಿಗೆ ಪಡೆದು ತನಿಖೆ ನಡೆಸಬೇಕಿದೆ’ ಎಂದು ಸಿಐಡಿ ಮೂಲಗಳು ತಿಳಿಸಿವೆ.</p>.<p><strong>ಕಾಂಗ್ರೆಸ್ ಮುಖಂಡ, ಐಪಿಎಸ್ ಅಧಿಕಾರಿ ಪುತ್ರರ ಸ್ನೇಹಿತ</strong></p>.<p>‘ಡ್ರಗ್ಸ್ ಪ್ರಕರಣದ ಆರೋಪಿ ಸುನೀಶ್ ಹೆಗ್ಡೆ ಹಾಗೂ ಶ್ರೀಕೃಷ್ಣ, ರಾಜಕಾರಣಿಗಳು, ಉದ್ಯಮಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ಮಕ್ಕಳ ಜೊತೆ ಸ್ನೇಹ ಹೊಂದಿದ್ದರು’ ಎಂದು ಸಿಐಡಿ ಮೂಲಗಳು ತಿಳಿಸಿವೆ.</p>.<p>‘ಸುನೀಶ್ ಹೆಗ್ಡೆ, ಕಾಂಗ್ರೆಸ್ ಪಕ್ಷದ ಪ್ರಭಾವಿ ರಾಜಕಾರಣಿಯೊಬ್ಬರ ಪುತ್ರನ ಆಪ್ತ ಸ್ನೇಹಿತ. ಶ್ರೀಕೃಷ್ಣ, ಹಿರಿಯ ಐಪಿಎಸ್ ಅಧಿಕಾರಿ ಪುತ್ರನ ಸ್ನೇಹಿತ. ಡ್ರಗ್ಸ್ ಹಾಗೂ ಸೈಬರ್ ವಂಚನೆ ಜಾಲದಲ್ಲಿ ದೊಡ್ಡವರ ಮಕ್ಕಳೂ ಶಾಮೀಲಾಗಿರುವ ಮಾಹಿತಿ ಇದ್ದು, ತನಿಖೆ ಮುಂದುವರಿದಿದೆ’ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಡ್ರಗ್ಸ್ ಜಾಲ ಪ್ರಕರಣದಲ್ಲಿ ಸೆರೆಸಿಕ್ಕಿರುವ ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ (25), ಕೇವಲ ಎರಡೇ ಜಾಲತಾಣಗಳನ್ನು ಹ್ಯಾಕ್ ಮಾಡಿ ₹ 19 ಕೋಟಿ ಗಳಿಸಿದ್ದನೆಂಬ ಸಂಗತಿ ಸಿಐಡಿ ಸೈಬರ್ ಪೊಲೀಸರ ತನಿಖೆಯಿಂದ ಬಯಲಾಗಿದೆ.</p>.<p>ಡ್ರಗ್ಸ್ ಜಾಲದ ಆರೋಪಿಗಳು ಸೈಬರ್ ವಂಚನೆಯಲ್ಲೂ ಶಾಮೀಲಾಗಿದ್ದಾರೆ. ಇದರಲ್ಲಿ ರಾಜಕೀಯ ಮುಖಂಡರು, ಉದ್ಯಮಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ಮಕ್ಕಳೂ ಭಾಗಿಯಾಗಿರುವ ಸಂಗತಿ ಹೊರಬಿದ್ದಿದೆ.</p>.<p>ಡಾರ್ಕ್ನೆಟ್ ಮೂಲಕ ಡ್ರಗ್ಸ್ ತರಿಸಿಕೊಂಡು ಮಾರಾಟ ಮಾಡುತ್ತಿದ್ದ ಆರೋಪದಡಿ ಎಂ. ಸುಜಯ್ನನ್ನು ಬಂಧಿಸಲಾಗಿತ್ತು. ಕೆಂಪೇಗೌಡ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ತನಿಖೆ ಕೈಗೊಂಡಿದ್ದ ಪೊಲೀಸರು, ಆರೋಪಿಗಳಾದ ಹೇಮಂತ್ ಮುದ್ದಪ್ಪ, ಸುನೀಶ್ ಹೆಗ್ಡೆ, ಪ್ರಸಿದ್ ಶೆಟ್ಟಿ, ಕಾಂಗ್ರೆಸ್ ಮುಖಂಡ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಸೇರಿದಂತೆ 7 ಮಂದಿಯನ್ನು ಬಂಧಿಸಿದ್ದರು. ಡ್ರಗ್ಸ್ ಖರೀದಿಗಾಗಿ ಆರೋಪಿಗಳಿಗೆ ಬಿಟ್ ಕಾಯಿನ್ ನೀಡುತ್ತಿದ್ದ ಆರೋಪದಡಿ ಶ್ರೀಕೃಷ್ಣನನ್ನು ಸೆರೆ ಹಿಡಿದಿದ್ದರು.</p>.<p class="Subhead">ರಾಜ್ಯ ಸರ್ಕಾರದ ಇ–ಪ್ರೊಕ್ಯೂರ್ಮೆಂಟ್ ಜಾಲತಾಣವನ್ನು 2019ರಲ್ಲಿ ಹ್ಯಾಕ್ ಮಾಡಿರುವ ಬಗ್ಗೆ ಸಿಐಡಿ ಸೈಬರ್ ಕ್ರೈಂ ವಿಭಾಗದಲ್ಲಿ ಪ್ರಕರಣ ದಾಖಲಾಗಿತ್ತು. ಇದರಲ್ಲೂ ಶ್ರೀಕೃಷ್ಣ ಭಾಗಿಯಾಗಿದ್ದು ತನಿಖೆಯಿಂದ ಗೊತ್ತಾಗಿತ್ತು.</p>.<p>ಶ್ರೀಕೃಷ್ಣ, ಸುನೀಶ್ ಹೆಗ್ಡೆ, ಪ್ರಸಿದ್ಧ್ ಶೆಟ್ಟಿಯನ್ನು ಸಿಐಡಿ ಪೊಲೀಸರು ವಿಚಾರಣೆ ನಡೆಸಿದಾಗ ಈ ಮಾಹಿತಿ ಗೊತ್ತಾಗಿದೆ.</p>.<p>‘ಜಯನಗರದ ಶ್ರೀಕೃಷ್ಣ, ನೆದರ್ಲ್ಯಾಂಡ್ನಲ್ಲಿ ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್) ಮುಗಿಸಿ ಬೆಂಗಳೂರಿಗೆ ವಾಪಸ್ ಬಂದು ಜಾಲತಾಣ ಹಾಗೂ ಸಾಮಾಜಿಕ ಜಾಲತಾಣ ಹ್ಯಾಕ್ ಮಾಡಲಾರಂಭಿಸಿದ್ದ. ಅದರಿಂದ ಕೋಟ್ಯಂತರ ರೂಪಾಯಿ ಸಂಪಾದಿಸಿದ್ದಾನೆ’ ಎಂದು ಸಿಐಡಿ ಮೂಲಗಳು ತಿಳಿಸಿವೆ.</p>.<p>‘ಇ–ಪ್ರೊಕ್ಯೂರ್ಮೆಂಟ್ ಹಾಗೂ ಖಾಸಗಿ ಕಂಪನಿಯೊಂದರ ಜಾಲತಾಣ ಹ್ಯಾಕ್ ಮಾಡಿದ್ದ ಶ್ರೀಕೃಷ್ಣ, ₹ 19 ಕೋಟಿ ಲಪಟಾಯಿಸಿದ್ದ. ಇದೇ ರೀತಿಯಲ್ಲಿ ಸಾಕಷ್ಟು ಜಾಲತಾಣಗಳನ್ನು ಹ್ಯಾಕ್ ಮಾಡಿ ಹಣ ಸಂಪಾದಿಸಿದ್ದಾನೆ. ಹಣ ಎಲ್ಲಿದೆ ಎಂಬುದನ್ನು ತಿಳಿಯಬೇಕಿದೆ’ ಎಂದೂ ಮೂಲಗಳು ಹೇಳಿವೆ.</p>.<p class="Subhead">ಶ್ರೀಕೃಷ್ಣನ ಹಣಕಾಸು ವ್ಯವಹಾರವನ್ನು ಸ್ನೇಹಿತ ರಾಬಿನ್ ನೋಡಿಕೊಳ್ಳುತ್ತಿದ್ದ. ಸಿಸಿಬಿ ವಶದಲ್ಲಿರುವ ಆತನನ್ನು ಕಸ್ಟಡಿಗೆ ಪಡೆದು ತನಿಖೆ ನಡೆಸಬೇಕಿದೆ’ ಎಂದು ಸಿಐಡಿ ಮೂಲಗಳು ತಿಳಿಸಿವೆ.</p>.<p><strong>ಕಾಂಗ್ರೆಸ್ ಮುಖಂಡ, ಐಪಿಎಸ್ ಅಧಿಕಾರಿ ಪುತ್ರರ ಸ್ನೇಹಿತ</strong></p>.<p>‘ಡ್ರಗ್ಸ್ ಪ್ರಕರಣದ ಆರೋಪಿ ಸುನೀಶ್ ಹೆಗ್ಡೆ ಹಾಗೂ ಶ್ರೀಕೃಷ್ಣ, ರಾಜಕಾರಣಿಗಳು, ಉದ್ಯಮಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ಮಕ್ಕಳ ಜೊತೆ ಸ್ನೇಹ ಹೊಂದಿದ್ದರು’ ಎಂದು ಸಿಐಡಿ ಮೂಲಗಳು ತಿಳಿಸಿವೆ.</p>.<p>‘ಸುನೀಶ್ ಹೆಗ್ಡೆ, ಕಾಂಗ್ರೆಸ್ ಪಕ್ಷದ ಪ್ರಭಾವಿ ರಾಜಕಾರಣಿಯೊಬ್ಬರ ಪುತ್ರನ ಆಪ್ತ ಸ್ನೇಹಿತ. ಶ್ರೀಕೃಷ್ಣ, ಹಿರಿಯ ಐಪಿಎಸ್ ಅಧಿಕಾರಿ ಪುತ್ರನ ಸ್ನೇಹಿತ. ಡ್ರಗ್ಸ್ ಹಾಗೂ ಸೈಬರ್ ವಂಚನೆ ಜಾಲದಲ್ಲಿ ದೊಡ್ಡವರ ಮಕ್ಕಳೂ ಶಾಮೀಲಾಗಿರುವ ಮಾಹಿತಿ ಇದ್ದು, ತನಿಖೆ ಮುಂದುವರಿದಿದೆ’ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>