<p><strong>ಬೆಂಗಳೂರು</strong>: ‘ಪ್ರಸಕ್ತ ಸಾಲಿನ ಏಪ್ರಿಲ್- ಜೂನ್ ಅವಧಿಯಲ್ಲಿ ದೇಶದ ಇತರ ರಾಜ್ಯಗಳಿಗಿಂತ ಕರ್ನಾಟಕ ಅತಿ ಹೆಚ್ಚು, ಅಂದರೆ ₹ 10 ಸಾವಿರ ಕೋಟಿ ವಿದೇಶಿ ನೇರ ಹೂಡಿಕೆ ಗಳಿಸಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.</p>.<p>ವಿವಿಧ ದೇಶಗಳ ರಾಯಭಾರಿಗಳು, ರಾಜತಾಂತ್ರಿಕರ ಜೊತೆ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಬುಧವಾರ ಮಾತುಕತೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಹೂಡಿಕೆಗೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮಗಳನ್ನು ವಿವರಿಸಿದರು.</p>.<p>ಐಟಿ, ಐಟಿಇಎಸ್ ಸೇವೆಗಳು, ಯಂತ್ರೋಪಕರಣಗಳು, ಉತ್ಪಾದನೆ, ಏರೋಸ್ಪೇಸ್, ಜೈವಿಕ ತಂತ್ರಜ್ಞಾನ ಮತ್ತು ಎಂಜಿನಿ ಯರಿಂಗ್ ಕ್ಷೇತ್ರಗಳಲ್ಲಿ ಹೂಡಿಕೆಗೆ ಇರುವ ಅವಕಾಶಗಳನ್ನು ವಿವ ರಿಸಿದ ಮುಖ್ಯಮಂತ್ರಿ, ಕರ್ನಾಟಕದಲ್ಲಿ ಹೂಡಿಕೆ ಮಾಡುವಂತೆ ಮನವಿ ಮಾಡಿದರು.</p>.<p>‘ಹೂಡಿಕೆದಾರರ ಹಿತ ಗಮನದಲ್ಲಿಟ್ಟು ರಾಜ್ಯದಲ್ಲಿ ಸುಧಾರಣಾ ನೀತಿ ತರಲಾಗಿದೆ. ಇದರಿಂದಾಗಿ ಅತಿ ಹೆಚ್ಚು ವಿದೇಶಿ ನೇರ ಹೂಡಿಕೆಯ ಜೊತೆಗೆ, ಜನವರಿಯಿಂದ ಮೇ ತಿಂಗಳವರೆಗಿನ ಹೂಡಿಕೆ ಪ್ರಸ್ತಾಪಗಳಲ್ಲಿ ಶೇ 50ರಷ್ಟು ತನ್ನದಾಗಿಸಿಕೊಂಡಿದೆ. ಹೂಡಿಕೆ ಪ್ರಸ್ತಾವಗಳ ಮೊತ್ತ ₹ 1.1 ಲಕ್ಷ ಕೋಟಿ’ ಎಂದು ಮುಖ್ಯಮಂತ್ರಿ ತಿಳಿಸಿದರು.</p>.<p>‘ತುಮಕೂರಿನಲ್ಲಿ 10 ಸಾವಿರ ಎಕರೆ ವಿಸ್ತೀರ್ಣದಲ್ಲಿ ದೇಶದ ಅತಿ ದೊಡ್ಡ ಕೈಗಾರಿಕಾ ಟೌನ್ಶಿಪ್ ಬರಲಿದೆ. ಅಲ್ಲಿ ಎಲ್ಲ ರೀತಿಯ ಮೂಲಸೌಕರ್ಯ ಒದಗಿಸಲಾಗುವುದು. ಬೆಂಗಳೂರು ಮಾತ್ರವಲ್ಲದೇ ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿಯಂಥ ಎರಡನೇ ಹಂತದ ನಗರಗಳಲ್ಲಿ ಹೂಡಿಕೆಗೆ ಪೂರಕ ವಾತಾ ವರಣ ಕಲ್ಪಿಸಲಾಗುವುದು’ ಎಂದರು.</p>.<p>‘ರಾಜ್ಯದಲ್ಲಿ ಹೂಡಿಕೆದಾರ ಸ್ನೇಹಿ ವಾತಾವರಣ ನಿರ್ಮಿಸಲು ಸರ್ಕಾರವು ಹೊಸ ಕೈಗಾರಿಕಾ ನೀತಿ ಜಾರಿಗೆ ತಂದಿದೆ. ಭೂಮಿ ಖರೀದಿ ಪ್ರಕ್ರಿಯೆ ಸರಳಗೊಳಿಸಲು, ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದೆ’ ಎಂದು ವಿವರಿಸಿದರು.</p>.<p>ಪೆರು ರಾಯಭಾರಿ ವಿಕ್ರಮ್ ವಿಶ್ವನಾಥ್ ಅವರು ನಿಯೋಗದ ನೇತೃತ್ವ ವಹಿಸಿದ್ದರು. ಮಾಲಿ, ಸ್ಪೇನ್ ಸೇರಿದಂತೆ 13 ದೇಶಗಳ ಕಾನ್ಸುಲ್ ಜನರಲ್ಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಪ್ರಸಕ್ತ ಸಾಲಿನ ಏಪ್ರಿಲ್- ಜೂನ್ ಅವಧಿಯಲ್ಲಿ ದೇಶದ ಇತರ ರಾಜ್ಯಗಳಿಗಿಂತ ಕರ್ನಾಟಕ ಅತಿ ಹೆಚ್ಚು, ಅಂದರೆ ₹ 10 ಸಾವಿರ ಕೋಟಿ ವಿದೇಶಿ ನೇರ ಹೂಡಿಕೆ ಗಳಿಸಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.</p>.<p>ವಿವಿಧ ದೇಶಗಳ ರಾಯಭಾರಿಗಳು, ರಾಜತಾಂತ್ರಿಕರ ಜೊತೆ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಬುಧವಾರ ಮಾತುಕತೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಹೂಡಿಕೆಗೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮಗಳನ್ನು ವಿವರಿಸಿದರು.</p>.<p>ಐಟಿ, ಐಟಿಇಎಸ್ ಸೇವೆಗಳು, ಯಂತ್ರೋಪಕರಣಗಳು, ಉತ್ಪಾದನೆ, ಏರೋಸ್ಪೇಸ್, ಜೈವಿಕ ತಂತ್ರಜ್ಞಾನ ಮತ್ತು ಎಂಜಿನಿ ಯರಿಂಗ್ ಕ್ಷೇತ್ರಗಳಲ್ಲಿ ಹೂಡಿಕೆಗೆ ಇರುವ ಅವಕಾಶಗಳನ್ನು ವಿವ ರಿಸಿದ ಮುಖ್ಯಮಂತ್ರಿ, ಕರ್ನಾಟಕದಲ್ಲಿ ಹೂಡಿಕೆ ಮಾಡುವಂತೆ ಮನವಿ ಮಾಡಿದರು.</p>.<p>‘ಹೂಡಿಕೆದಾರರ ಹಿತ ಗಮನದಲ್ಲಿಟ್ಟು ರಾಜ್ಯದಲ್ಲಿ ಸುಧಾರಣಾ ನೀತಿ ತರಲಾಗಿದೆ. ಇದರಿಂದಾಗಿ ಅತಿ ಹೆಚ್ಚು ವಿದೇಶಿ ನೇರ ಹೂಡಿಕೆಯ ಜೊತೆಗೆ, ಜನವರಿಯಿಂದ ಮೇ ತಿಂಗಳವರೆಗಿನ ಹೂಡಿಕೆ ಪ್ರಸ್ತಾಪಗಳಲ್ಲಿ ಶೇ 50ರಷ್ಟು ತನ್ನದಾಗಿಸಿಕೊಂಡಿದೆ. ಹೂಡಿಕೆ ಪ್ರಸ್ತಾವಗಳ ಮೊತ್ತ ₹ 1.1 ಲಕ್ಷ ಕೋಟಿ’ ಎಂದು ಮುಖ್ಯಮಂತ್ರಿ ತಿಳಿಸಿದರು.</p>.<p>‘ತುಮಕೂರಿನಲ್ಲಿ 10 ಸಾವಿರ ಎಕರೆ ವಿಸ್ತೀರ್ಣದಲ್ಲಿ ದೇಶದ ಅತಿ ದೊಡ್ಡ ಕೈಗಾರಿಕಾ ಟೌನ್ಶಿಪ್ ಬರಲಿದೆ. ಅಲ್ಲಿ ಎಲ್ಲ ರೀತಿಯ ಮೂಲಸೌಕರ್ಯ ಒದಗಿಸಲಾಗುವುದು. ಬೆಂಗಳೂರು ಮಾತ್ರವಲ್ಲದೇ ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿಯಂಥ ಎರಡನೇ ಹಂತದ ನಗರಗಳಲ್ಲಿ ಹೂಡಿಕೆಗೆ ಪೂರಕ ವಾತಾ ವರಣ ಕಲ್ಪಿಸಲಾಗುವುದು’ ಎಂದರು.</p>.<p>‘ರಾಜ್ಯದಲ್ಲಿ ಹೂಡಿಕೆದಾರ ಸ್ನೇಹಿ ವಾತಾವರಣ ನಿರ್ಮಿಸಲು ಸರ್ಕಾರವು ಹೊಸ ಕೈಗಾರಿಕಾ ನೀತಿ ಜಾರಿಗೆ ತಂದಿದೆ. ಭೂಮಿ ಖರೀದಿ ಪ್ರಕ್ರಿಯೆ ಸರಳಗೊಳಿಸಲು, ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದೆ’ ಎಂದು ವಿವರಿಸಿದರು.</p>.<p>ಪೆರು ರಾಯಭಾರಿ ವಿಕ್ರಮ್ ವಿಶ್ವನಾಥ್ ಅವರು ನಿಯೋಗದ ನೇತೃತ್ವ ವಹಿಸಿದ್ದರು. ಮಾಲಿ, ಸ್ಪೇನ್ ಸೇರಿದಂತೆ 13 ದೇಶಗಳ ಕಾನ್ಸುಲ್ ಜನರಲ್ಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>