ಶಿವಮೊಗ್ಗ: ಮಂಗಳೂರಿನಲ್ಲಿ ಆಟೊದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರಿಕ್ ಆರೋಗ್ಯ ಸುಧಾರಿಸಿದ ನಂತರ ಆತನ ಹೇಳಿಕೆ ಪಡೆದು ತನಿಖೆ ತೀವ್ರಗೊಳಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆರೋಪಿಯ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ಇದರ ಆಧಾರದ ಮೇಲೆ ತನಿಖೆ ನಡೆಸಲಾಗುವುದು’ ಎಂದರು.
‘ಮಹಾರಾಷ್ಟ್ರದ 47 ಗ್ರಾಮಗಳು ಕರ್ನಾಟಕ ಸೇರಲು ಬೇಡಿಕೆ ಇಟ್ಟಿದ್ದು, ಕಾನೂನಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಎಡಿಜಿಪಿಗೆ ಸೂಚನೆನೀಡಿ ಗಡಿ ಭಾಗದ ಗ್ರಾಮಗಳಿಗೆ ರಕ್ಷಣೆ ನೀಡಲಾಗುವುದು’ ಎಂದರು.