ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೂಡಿಕೆದಾರರ ಅರ್ಜಿ ಆಯಾ ತಿಂಗಳಲ್ಲೇ ಪರಿಶೀಲನೆ: ಶೆಟ್ಟರ್‌

Last Updated 13 ಫೆಬ್ರುವರಿ 2021, 11:03 IST
ಅಕ್ಷರ ಗಾತ್ರ

ಹುಬ್ಬಳ್ಳಿ: ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಉದ್ಯಮಿಗಳಿಗೆ ಅನುಕೂಲ ಕಲ್ಪಿಸಲು ಪರವಾನಗಿಗೆ ಸಲ್ಲಿಸಿದ ಅರ್ಜಿಗಳನ್ನು ಆಯಾ ತಿಂಗಳಲ್ಲೇ ಪರಿಶೀಲನೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಬೃಹತ್‌ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

ನೂತನ ಕೈಗಾರಿಕಾ ನೀತಿ 2020–25 ಮತ್ತು ಹೂಡಿಕೆ ಅವಕಾಶಗಳು ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಶನಿವಾರ ಮಾತನಾಡಿದ ಅವರು ‘ಮೊದಲು ಎರಡ್ಮೂರು ತಿಂಗಳಿಗೊಮ್ಮೆ ಅರ್ಜಿಗಳ ಪರಿಶೀಲನೆ ನಡೆಯುತ್ತಿತ್ತು. ಈಗ ಪ್ರತಿ ತಿಂಗಳು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದರು.

ಮಸೂದೆ ಸಿದ್ಧ: ಧಾರವಾಡ, ಶಿವಮೊಗ್ಗ, ಕಲಬುರ್ಗಿ ಜಿಲ್ಲೆಗಳು ಹಾಗೂ ಇವುಗಳ ಅಕ್ಕಪಕ್ಕದ ಜಿಲ್ಲೆಗಳ ಗ್ರಾಮಗಳಲ್ಲಿ ಹೂಡಿಕೆಗೆ ಉತ್ತೇಜನ ನೀಡುವ ಸಲುವಾಗಿ ವಿಶೇಷ ಹೂಡಿಕೆ ವಲಯ ಮಾಡಲಾಗುವುದು. ಇದಕ್ಕಾಗಿ ಮಸೂದೆ ಸಿದ್ಧಪಡಿಸಲಾಗಿದ್ದು, ಅಧಿವೇಶನದಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗುತ್ತದೆ ಎಂದು ಶೆಟ್ಟರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT