‘ಭಿನ್ನಮತೀಯರಿಗೆ ತಕ್ಕ ಶಾಸ್ತಿ ಕಲಿಸುವ ಬಗ್ಗೆ ವರಿಷ್ಠರು ಭರವಸೆ ಕೊಟ್ಟಿದ್ದು, ಸದ್ಯದಲ್ಲೇ ಅವರೆಲ್ಲರ ವಿರುದ್ಧ ಶಿಸ್ತು ಕ್ರಮ ಜರುಗಲಿದೆ ಎಂಬ ಸುದ್ದಿಯನ್ನು ಈ ಬೆಳವಣಿಗೆ ಬೆನ್ನಲ್ಲೇ ಹರಿಬಿಡಲಾಯಿತು. ಪಕ್ಷದ ಅಧ್ಯಕ್ಷ ಸ್ಥಾನದ ಮೇಲೆ ವಿಜಯೇಂದ್ರ ಕಣ್ಣಿಟ್ಟಿರುವ ಕಾರಣಕ್ಕೆ, ಈಗಿನ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ದುರ್ಬಲ ಅಧ್ಯಕ್ಷ ಎಂದು ಬಿಂಬಿಸುವ ಯತ್ನವೂ ನಡೆಯುತ್ತಿದೆ’ ಎಂದೂ ಬಿಜೆಪಿ ಮೂಲಗಳು ಹೇಳುತ್ತಿವೆ.