ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಈವರೆಗೆ ವಿದ್ಯುತ್ ಕೊರತೆ ಸೃಷ್ಟಿಯಾಗಿರಲಿಲ್ಲ. ಯಾವಾಗಲೂ ನಮ್ಮಲ್ಲಿ ಅಗತ್ಯಕ್ಕಿಂತ ಹೆಚ್ಚು ಪ್ರಮಾಣದ ವಿದ್ಯುತ್ ಉತ್ಪಾದನೆ ಆಗುತ್ತಿತ್ತು. ರಾಜ್ಯಕ್ಕೆ ಕಲ್ಲಿದ್ದಲು ದೊಡ್ಡ ಪ್ರಮಾಣದಲ್ಲೇನೂ ಬೇಕಿಲ್ಲ. ಆದರೂ, ಕೊರತೆ ಆಗಿರುವುದು ಸಂಶಯಕ್ಕೆ ಕಾರಣವಾಗಿದೆ. ವಿದ್ಯುತ್ ಉತ್ಪಾದನಾ ಸ್ಥಾವರಗಳನ್ನು ಖಾಸಗಿಯವರಿಗೆ ಉದ್ದೇಶದಿಂದ ಸರ್ಕಾರವೇ ಕೃತಕವಾಗಿ ಕಲ್ಲಿದ್ದಲಿನ ಅಭಾವ ಸೃಷ್ಟಿಸಬಾರದು. ಆ ರೀತಿ ಮಾಡಿದರೆ ಅದನ್ನು ನಾನು ಖಂಡಿಸುತ್ತೇನೆ’ ಎಂದರು.