ಬೆಂಗಳೂರು: ಗಲಭೆ ಪ್ರಕರಣದ ತನಿಖೆಯನ್ನು ಸ್ಥಳೀಯ ಪೊಲೀಸರು ಚುರುಕುಗೊಳಿಸಿರುವ ಬೆನ್ನಲ್ಲೇ ನಗರಕ್ಕೆ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಹೆಜ್ಜೆ ಇಟ್ಟಿದ್ದಾರೆ. ನಗರದಲ್ಲಿ ಸೋಮವಾರ ಪ್ರತ್ಯೇಕವಾಗಿ ವಿಶೇಷ ಕಾರ್ಯಾಚಣೆ ನಡೆಸಿರುವ ಎನ್ಐಎ ಅಧಿಕಾರಿಗಳು, ಇಸ್ಲಾಮಿಕ್ ಸ್ಟೇಟ್ (ಐಎಸ್) ಉಗ್ರಗಾಮಿ ಸಂಘಟನೆಜೊತೆ ನಂಟು ಹೊಂದಿದ್ದ ಎನ್ನಲಾದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.