ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಸವರಾಜ ಬೊಮ್ಮಾಯಿ ಅವರ ಹೆಸರು ಸೂಚಿಸಿರುವುದು ಯಡಿಯೂರಪ್ಪ. ಸರ್ಕಾರದ ಮೇಲೆ ಅವರು ಸಹಜವಾಗಿ ಹಿಡಿತ ಹೊಂದಿರುತ್ತಾರೆ. ಇಂಥ ಸಂದರ್ಭದಲ್ಲಿ ನೂತನ ಮುಖ್ಯಮಂತ್ರಿ ಸ್ವತಂತ್ರವಾಗಿ ಸರ್ಕಾರ ನಡೆಸಲು ಸಾಧ್ಯವಾಗುತ್ತದೆಯೇ? ಬಿಜೆಪಿಯ ಸಿದ್ಧಾಂತ, ಸರ್ಕಾರದ ನೀತಿಗಳು ಬದಲಾಗುತ್ತವೆಯೇ?’ ಎಂದು ಪ್ರಶ್ನಿಸಿದರು.