ನಗರದ ಪ್ರಥಮದರ್ಜೆ ಗುತ್ತಿಗೆ ದಾರ ಎಂ.ಚಿರಂಜೀವಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಕುರಿತಂತೆ ಆದೇಶಿಸಿದ್ದು, ‘ಸಾರ್ವಜನಿಕ ಹಿತಾಸಕ್ತಿ ಕಡೆಗಣಿಸಿರುವ ಸರ್ಕಾರದ ಅಂಗ ಸಂಸ್ಥೆಗಳು ಉದಾಸೀನತೆಯ ಪ್ರತಿರೂಪವಾಗಿವೆ. ಇಂತಹುದನ್ನು ನ್ಯಾಯಾಲಯ ಸಹಿಸುವುದಿಲ್ಲ’ ಎಂದು ಖಡಕ್ ಎಚ್ಚರಿಕೆ ನೀಡಿದೆ.