<p><strong>ಬಳ್ಳಾರಿ:</strong> ಜಿಲ್ಲೆಯ ಪ್ರಭಾವಿ ರಾಜಕಾರಣಿಗಳ ಜತೆ ನಿಕಟ ಸಂಬಂಧ ಹೊಂದಿದ್ದಾರೆ ಎನ್ನಲಾದ ಕೆಲ ಗಣಿ ಉದ್ಯಮಿಗಳ ಮನೆ ಹಾಗೂ ಅವರ ಸ್ಪಾಂಜ್ ಉಕ್ಕಿನ ಕಾರ್ಖಾನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.</p>.<p>ಬೆಂಗಳೂರು, ಬಳ್ಳಾರಿ ಹಾಗೂ ಕೊಪ್ಪಳ ಸೇರಿದಂತೆ ಹಲವು ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದೊಡ್ಡ ತಂಡ ಏಕಕಾಲಕ್ಕೆ ದಾಳಿ ನಡೆಸಿದೆ. ಮೂರು ದಿನಗಳಿಂದ ಸತತ ದಾಖಲೆ ಪರಿಶೀಲನೆ ನಡೆಯುತ್ತಿದೆ ಎಂದು ವಿಶ್ವಸನೀಯ ಮೂಲಗಳು ‘ಪ್ರಜಾವಾಣಿ‘ಗೆ ತಿಳಿಸಿವೆ.</p>.<p>ಸ್ಪಾಂಜ್ ಉಕ್ಕಿನ ಕಾರ್ಖಾನೆ ನಡೆಸುತ್ತಿರುವ ಗಣಿ ಉದ್ಯಮಿ ಜಿಲ್ಲೆಯ ಪ್ರಭಾವಿ ರಾಜಕಾರಣಿಗಳು ಹಾಗೂ ಅವರ ಹತ್ತಿರದ ಸಂಬಂಧಿ ಜತೆ ಪಾಲುದಾರಿಕೆ ಹೊಂದಿದ್ದಾರೆ ಎನ್ನಲಾಗಿದೆ. ಯಾರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ ಎಂಬುದನ್ನು ಮೂಲಗಳು ಬಹಿರಂಗ ಮಾಡಿಲ್ಲ.</p>.<p>ಆದರೆ, ಈ ಗಣಿ ಉದ್ಯಮಿಗೆ ಸೆಪ್ಟೆಂಬರ್ ತಿಂಗಳಲ್ಲಿ ಹೈದರಾಬಾದ್ನ ಸಿಬಿಐ ಕಚೇರಿಗೆ ಕರೆಸಿ ವಿಚಾರಣೆ ನಡೆಸಲಾಗಿತ್ತು. ಮಾಜಿ ಸಚಿವ ಜನಾರ್ದನರೆಡ್ಡಿ ಅಥವಾ ಬೇರೆ ಯಾವುದೇ ರಾಜಕಾರಣಿಗಳ ಜತೆ ವ್ಯಾವಹಾರಿಕ ಸಂಬಂಧವಿದೆಯೇ ಎಂದು ವಿಚಾರಣೆ ನಡೆದಿತ್ತು.</p>.<p>ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ವರದಿಯಿಂದ ಬಳ್ಳಾರಿ ದೇಶಾದ್ಯಂತ ಸದ್ದು ಮಾಡಿತ್ತು. ಈ ಆರೋಪ ಸಂಬಂಧ ಮಾಜಿ ಸಚಿವ ಜನಾರ್ದನ ರೆಡ್ಡಿ 2011ರಲ್ಲಿ ಜೈಲು ಸೇರಿದ್ದರು. ನಾಲ್ಕು ವರ್ಷಗಳ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದಾರೆ. ಈಗ ಅವರನ್ನು ಬಳ್ಳಾರಿಗೆ ಬರದಂತೆ ನಿರ್ಬಂಧಿಸಲಾಗಿದೆ.</p>.<p><strong>ಶ್ರೀರಾಮುಲು ನಿರಾಕರಣೆ</strong><br />ತಮ್ಮ ಪಾಲುದಾರಿಕೆಗೆ ಸೇರಿದ್ದೆನ್ನಲಾದ ಸ್ಪಾಂಜ್ ಉಕ್ಕಿನ ಕಾರ್ಖಾನೆ ಮೇಲೆ ಐ.ಟಿ ದಾಳಿ ನಡೆದಿದೆ ಎಂಬ ಆರೋಪವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ನಿರಾಕರಿಸಿದ್ದಾರೆ.</p>.<p>‘ನಾನು ಯಾವ ಕಾರ್ಖಾನೆಯಲ್ಲೂ ಪಾಲುದಾರಿಕೆ ಹೊಂದಿಲ್ಲ. ಗಣಿಗಾರಿಕೆ ಉದ್ಯಮ ತುತ್ತ ತುದಿಯಲ್ಲಿದ್ದಾಗಲೇ ಯಾರ ಜತೆ ಪಾಲುದಾರಿಕೆ ಹೊಂದಿರಲಿಲ್ಲ. ಈಗ ಹೇಗೆ ಪಾಲುದಾರಿಕೆ ಹೊಂದುತ್ತೇನೆ’ ಎಂದು ಶ್ರೀರಾಮುಲು ಮಾಧ್ಯಮ ಪ್ರತಿನಿಧಿಗಳನ್ನು ಪ್ರಶ್ನಿಸಿದರು.</p>.<p>ಆದಾಯ ತೆರಿಗೆ ಇಲಾಖೆ ದಾಳಿ ನಡೆಯುತ್ತಿರುತ್ತದೆ. ಆದಾಯ ತೆರಿಗೆ ತಪ್ಪಿಸಿದ ವೇಳೆ ಇಂಥ ದಾಳಿಗಳು ಸಾಮಾನ್ಯ. ಯಾರ ಮೇಲೆ ದಾಳಿ ನಡೆದರೂ ಕಾನೂನು ತನ್ನದೇ ಕ್ರಮ ಕೈಗೊಳ್ಳಲಿದೆ ಎಂದೂ ಸಚಿವರು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಜಿಲ್ಲೆಯ ಪ್ರಭಾವಿ ರಾಜಕಾರಣಿಗಳ ಜತೆ ನಿಕಟ ಸಂಬಂಧ ಹೊಂದಿದ್ದಾರೆ ಎನ್ನಲಾದ ಕೆಲ ಗಣಿ ಉದ್ಯಮಿಗಳ ಮನೆ ಹಾಗೂ ಅವರ ಸ್ಪಾಂಜ್ ಉಕ್ಕಿನ ಕಾರ್ಖಾನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.</p>.<p>ಬೆಂಗಳೂರು, ಬಳ್ಳಾರಿ ಹಾಗೂ ಕೊಪ್ಪಳ ಸೇರಿದಂತೆ ಹಲವು ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದೊಡ್ಡ ತಂಡ ಏಕಕಾಲಕ್ಕೆ ದಾಳಿ ನಡೆಸಿದೆ. ಮೂರು ದಿನಗಳಿಂದ ಸತತ ದಾಖಲೆ ಪರಿಶೀಲನೆ ನಡೆಯುತ್ತಿದೆ ಎಂದು ವಿಶ್ವಸನೀಯ ಮೂಲಗಳು ‘ಪ್ರಜಾವಾಣಿ‘ಗೆ ತಿಳಿಸಿವೆ.</p>.<p>ಸ್ಪಾಂಜ್ ಉಕ್ಕಿನ ಕಾರ್ಖಾನೆ ನಡೆಸುತ್ತಿರುವ ಗಣಿ ಉದ್ಯಮಿ ಜಿಲ್ಲೆಯ ಪ್ರಭಾವಿ ರಾಜಕಾರಣಿಗಳು ಹಾಗೂ ಅವರ ಹತ್ತಿರದ ಸಂಬಂಧಿ ಜತೆ ಪಾಲುದಾರಿಕೆ ಹೊಂದಿದ್ದಾರೆ ಎನ್ನಲಾಗಿದೆ. ಯಾರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ ಎಂಬುದನ್ನು ಮೂಲಗಳು ಬಹಿರಂಗ ಮಾಡಿಲ್ಲ.</p>.<p>ಆದರೆ, ಈ ಗಣಿ ಉದ್ಯಮಿಗೆ ಸೆಪ್ಟೆಂಬರ್ ತಿಂಗಳಲ್ಲಿ ಹೈದರಾಬಾದ್ನ ಸಿಬಿಐ ಕಚೇರಿಗೆ ಕರೆಸಿ ವಿಚಾರಣೆ ನಡೆಸಲಾಗಿತ್ತು. ಮಾಜಿ ಸಚಿವ ಜನಾರ್ದನರೆಡ್ಡಿ ಅಥವಾ ಬೇರೆ ಯಾವುದೇ ರಾಜಕಾರಣಿಗಳ ಜತೆ ವ್ಯಾವಹಾರಿಕ ಸಂಬಂಧವಿದೆಯೇ ಎಂದು ವಿಚಾರಣೆ ನಡೆದಿತ್ತು.</p>.<p>ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ವರದಿಯಿಂದ ಬಳ್ಳಾರಿ ದೇಶಾದ್ಯಂತ ಸದ್ದು ಮಾಡಿತ್ತು. ಈ ಆರೋಪ ಸಂಬಂಧ ಮಾಜಿ ಸಚಿವ ಜನಾರ್ದನ ರೆಡ್ಡಿ 2011ರಲ್ಲಿ ಜೈಲು ಸೇರಿದ್ದರು. ನಾಲ್ಕು ವರ್ಷಗಳ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದಾರೆ. ಈಗ ಅವರನ್ನು ಬಳ್ಳಾರಿಗೆ ಬರದಂತೆ ನಿರ್ಬಂಧಿಸಲಾಗಿದೆ.</p>.<p><strong>ಶ್ರೀರಾಮುಲು ನಿರಾಕರಣೆ</strong><br />ತಮ್ಮ ಪಾಲುದಾರಿಕೆಗೆ ಸೇರಿದ್ದೆನ್ನಲಾದ ಸ್ಪಾಂಜ್ ಉಕ್ಕಿನ ಕಾರ್ಖಾನೆ ಮೇಲೆ ಐ.ಟಿ ದಾಳಿ ನಡೆದಿದೆ ಎಂಬ ಆರೋಪವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ನಿರಾಕರಿಸಿದ್ದಾರೆ.</p>.<p>‘ನಾನು ಯಾವ ಕಾರ್ಖಾನೆಯಲ್ಲೂ ಪಾಲುದಾರಿಕೆ ಹೊಂದಿಲ್ಲ. ಗಣಿಗಾರಿಕೆ ಉದ್ಯಮ ತುತ್ತ ತುದಿಯಲ್ಲಿದ್ದಾಗಲೇ ಯಾರ ಜತೆ ಪಾಲುದಾರಿಕೆ ಹೊಂದಿರಲಿಲ್ಲ. ಈಗ ಹೇಗೆ ಪಾಲುದಾರಿಕೆ ಹೊಂದುತ್ತೇನೆ’ ಎಂದು ಶ್ರೀರಾಮುಲು ಮಾಧ್ಯಮ ಪ್ರತಿನಿಧಿಗಳನ್ನು ಪ್ರಶ್ನಿಸಿದರು.</p>.<p>ಆದಾಯ ತೆರಿಗೆ ಇಲಾಖೆ ದಾಳಿ ನಡೆಯುತ್ತಿರುತ್ತದೆ. ಆದಾಯ ತೆರಿಗೆ ತಪ್ಪಿಸಿದ ವೇಳೆ ಇಂಥ ದಾಳಿಗಳು ಸಾಮಾನ್ಯ. ಯಾರ ಮೇಲೆ ದಾಳಿ ನಡೆದರೂ ಕಾನೂನು ತನ್ನದೇ ಕ್ರಮ ಕೈಗೊಳ್ಳಲಿದೆ ಎಂದೂ ಸಚಿವರು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>