ಉಮೇಶ್, ಅರವಿಂದ್ ಜತೆಗೂ ನಂಟು: ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಕುಟುಂಬದ ನಿಕಟವರ್ತಿಯಾಗಿದ್ದು, ಮುಖ್ಯಮಂತ್ರಿಯವರ ಸಚಿವಾಲಯದ ಸಿಬ್ಬಂದಿಯಾಗಿದ್ದ ಬಿಎಂಟಿಸಿ ಚಾಲಕ ಕಂ ನಿರ್ವಾಹಕ ಆಯನೂರು ಉಮೇಶ್ ಮತ್ತು ಬಿ.ವೈ. ವಿಜಯೇಂದ್ರ ಅವರ ಸಹಪಾಠಿ ಅರವಿಂದ್ ಜತೆಗೆ ಸೋಮಶೇಖರ್ ನಿಕಟ ನಂಟು ಹೊಂದಿದ್ದರು. ಈ ಕಾರಣಕ್ಕಾಗಿಯೇ ಅವರ ಮನೆಯ ಮೇಲೆಯೂ ದಾಳಿ ನಡೆದಿದೆ ಎಂದು ಮೂಲಗಳು ಹೇಳಿವೆ.