<p><strong>ಬೆಂಗಳೂರು:</strong> ‘ರಾಜ್ಯದ ಎಷ್ಟು ಜೈಲುಗಳಿಗೆ ಇಂಟರ್ನೆಟ್ ಸಂಪರ್ಕ ಕಲ್ಪಿಸಲಾಗಿದೆ ಮತ್ತು ಎಷ್ಟು ಜೈಲುಗಳಲ್ಲಿ ಹೊಸದಾಗಿ ಸಂಪರ್ಕ ಕಲ್ಪಿಸಬೇಕಿದೆ ಎಂಬ ಬಗ್ಗೆ ಮಾಹಿತಿ ನೀಡಿ’ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.</p>.<p>ಜೈಲುಗಳಲ್ಲಿನ ಸ್ಥಿತಿಗತಿ ಕುರಿತಂತೆ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎನ್.ಪಿ.ಅಮೃತೇಶ್, ‘ಬೆಂಗಳೂರು, ಮೈಸೂರು ಸೇರಿದಂತೆ ಪ್ರಮುಖ ನಗರಗಳ ಜೈಲುಗಳಿಗೆ ಹೋಲಿಸಿದರೆ ಇತರೆಡೆಗಳಲ್ಲಿ ಜೈಲುಗಳಿಗೆ ಇಂಟರ್ನೆಟ್ ಸಂಪರ್ಕವಿಲ್ಲ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಶಿಕ್ಷೆಗೊಳಗಾಗಿರುವ ಬಹಳಷ್ಟು ಕೈದಿಗಳು ಜೈಲಿನಲ್ಲೇ ಕೊಳೆಯುತ್ತಿರುತ್ತಾರೆ, ಅವರಿಗೆ ಯಾರ ನೆರವೂ ಸಿಗುವುದಿಲ್ಲ. ಅಂತಹವರಿಗೆ ಹೈಕೋರ್ಟ್ ಕಾನೂನು ಸೇವಾ ಪ್ರಾಧಿಕಾರಗಳ ಮೂಲಕ ನೆರವು ನೀಡಬಹುದು. ಈಗಾಗಲೇ ಬಹಳಷ್ಟು ರಾಜ್ಯಗಳಲ್ಲಿ ಕಾರಾಗೃಹಗಳಿಗೆ ಇಂಟರ್ನೆಟ್ ಸಂಪರ್ಕ ಕಲ್ಪಿಸಿ ಆ ಬಗ್ಗೆ ನಿಗಾ ವಹಿಸಲಾಗುತ್ತಿದೆ.ಜೈಲುಗಳಿಗೆ ವಿಡಿಯೊ ಸಂಪರ್ಕ ಕಲ್ಪಿಸುವುದರಿಂದ ಕೈದಿಗಳ ಸಾಕಷ್ಟು ಸಮಸ್ಯೆಗಳನ್ನು ಬಗೆಹರಿಸಬಹುದು’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.</p>.<p>ಕಾನೂನು ಸೇವಾ ಪ್ರಾಧಿಕಾರದ ಪರ ವಕೀಲ ಶ್ರೀಧರ್ ಪ್ರಭು, ‘ಜೈಲುಗಳ ಮೂಲಸೌಕರ್ಯದ ಬಗ್ಗೆ ಪ್ರಾಧಿಕಾರ ಈಗಾಗಲೇ ಗಮನಹರಿಸಿದೆ. ಆದಾಗ್ಯೂ, ಈಗ ಅರ್ಜಿದಾರರು ಹೇಳುತ್ತಿರುವ ಅಂಶವನ್ನೂ ಪರಿಗಣಿಸಲಾಗುವುದು’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.ವಿಚಾರಣೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯದ ಎಷ್ಟು ಜೈಲುಗಳಿಗೆ ಇಂಟರ್ನೆಟ್ ಸಂಪರ್ಕ ಕಲ್ಪಿಸಲಾಗಿದೆ ಮತ್ತು ಎಷ್ಟು ಜೈಲುಗಳಲ್ಲಿ ಹೊಸದಾಗಿ ಸಂಪರ್ಕ ಕಲ್ಪಿಸಬೇಕಿದೆ ಎಂಬ ಬಗ್ಗೆ ಮಾಹಿತಿ ನೀಡಿ’ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.</p>.<p>ಜೈಲುಗಳಲ್ಲಿನ ಸ್ಥಿತಿಗತಿ ಕುರಿತಂತೆ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎನ್.ಪಿ.ಅಮೃತೇಶ್, ‘ಬೆಂಗಳೂರು, ಮೈಸೂರು ಸೇರಿದಂತೆ ಪ್ರಮುಖ ನಗರಗಳ ಜೈಲುಗಳಿಗೆ ಹೋಲಿಸಿದರೆ ಇತರೆಡೆಗಳಲ್ಲಿ ಜೈಲುಗಳಿಗೆ ಇಂಟರ್ನೆಟ್ ಸಂಪರ್ಕವಿಲ್ಲ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಶಿಕ್ಷೆಗೊಳಗಾಗಿರುವ ಬಹಳಷ್ಟು ಕೈದಿಗಳು ಜೈಲಿನಲ್ಲೇ ಕೊಳೆಯುತ್ತಿರುತ್ತಾರೆ, ಅವರಿಗೆ ಯಾರ ನೆರವೂ ಸಿಗುವುದಿಲ್ಲ. ಅಂತಹವರಿಗೆ ಹೈಕೋರ್ಟ್ ಕಾನೂನು ಸೇವಾ ಪ್ರಾಧಿಕಾರಗಳ ಮೂಲಕ ನೆರವು ನೀಡಬಹುದು. ಈಗಾಗಲೇ ಬಹಳಷ್ಟು ರಾಜ್ಯಗಳಲ್ಲಿ ಕಾರಾಗೃಹಗಳಿಗೆ ಇಂಟರ್ನೆಟ್ ಸಂಪರ್ಕ ಕಲ್ಪಿಸಿ ಆ ಬಗ್ಗೆ ನಿಗಾ ವಹಿಸಲಾಗುತ್ತಿದೆ.ಜೈಲುಗಳಿಗೆ ವಿಡಿಯೊ ಸಂಪರ್ಕ ಕಲ್ಪಿಸುವುದರಿಂದ ಕೈದಿಗಳ ಸಾಕಷ್ಟು ಸಮಸ್ಯೆಗಳನ್ನು ಬಗೆಹರಿಸಬಹುದು’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.</p>.<p>ಕಾನೂನು ಸೇವಾ ಪ್ರಾಧಿಕಾರದ ಪರ ವಕೀಲ ಶ್ರೀಧರ್ ಪ್ರಭು, ‘ಜೈಲುಗಳ ಮೂಲಸೌಕರ್ಯದ ಬಗ್ಗೆ ಪ್ರಾಧಿಕಾರ ಈಗಾಗಲೇ ಗಮನಹರಿಸಿದೆ. ಆದಾಗ್ಯೂ, ಈಗ ಅರ್ಜಿದಾರರು ಹೇಳುತ್ತಿರುವ ಅಂಶವನ್ನೂ ಪರಿಗಣಿಸಲಾಗುವುದು’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.ವಿಚಾರಣೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>