‘ಜನೌಷಧ ಮಳಿಗೆ ಸ್ಥಾಪನೆಯಲ್ಲಿ ಕರ್ನಾಟಕ ದ್ವಿತೀಯಸ್ಥಾನದಲ್ಲಿದ್ದು, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಈ ಮಳಿಗೆಯನ್ನು ಸ್ಥಾಪಿಸಲಾಗುವುದು.ಬಡ, ಹಿಂದುಳಿದ ಮತ್ತು ಮಧ್ಯಮ ವರ್ಗದವರಿಗೆ ರಿಯಾಯಿತಿ ದರದಲ್ಲಿ ಔಷಧಗಳು ಹಾಗೂ ಶಸ್ತ್ರಚಿಕಿತ್ಸೆಯ ಪರಿಕರಗಳನ್ನು ಒದಗಿಸಲು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಸಹಕಾರಿಯಾಗಿದೆ. ಈ ಯೋಜನೆಯನ್ನು ರಾಜ್ಯದಲ್ಲಿಅತ್ಯುತ್ತಮವಾಗಿ ಜಾರಿಗೊಳಿಸಲಾಗಿದ್ದು, ಈವರೆಗೆ 1,052 ಜನೌಷಧ ಮಳಿಗೆಗಳನ್ನು ತೆರೆಯಲಾಗಿದೆ’ ಎಂದು ಹೇಳಿದ್ದಾರೆ.