ಜನಾರ್ದನ ರೆಡ್ಡಿ ಹಾಗೂ ಅವರ ಪತ್ನಿ ಜೆ.ಲಕ್ಷ್ಮಿ ಅರುಣಾ, ನಿವೃತ್ತ ಐಎಎಸ್ ಅಧಿಕಾರಿ ಶಿವಲಿಂಗಮೂರ್ತಿ, ಐಎಫ್ಎಸ್ ಅಧಿಕಾರಿ ಎಸ್.ಮುತ್ತಯ್ಯ, ರೆಡ್ಡಿ ಆಪ್ತರಾಗಿದ್ದ ಕೆ.ಮೆಹಫೂಜ್ ಅಲಿ ಖಾನ್, ಎಸ್.ಪಿ.ರಾಜು, ಮಹೇಶ್ ಎ.ಪಾಟೀಲ ಹಾಗೂ ನಿವೃತ್ತ ವಲಯ ಅರಣ್ಯಾಧಿಕಾರಿ ಎಚ್.ರಾಮಮೂರ್ತಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.