ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಪಿ. ರಾಮಯ್ಯ ಅವರು ಜೆಡಿಎಸ್ನ ಮಾಸಪತ್ರಿಕೆ 'ಜನತಾ ಪತ್ರಿಕೆ' ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಕುಮಾರಸ್ವಾಮಿ, ‘ಈ ಪತ್ರಿಕೆ ಜನತಾದಳದ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗುವುದಿಲ್ಲ. ಪಕ್ಷದ ಅಭಿಮಾನಿಗಳಿಗಷ್ಟೇ ಸೀಮಿತ ಅಲ್ಲ. ಪತ್ರಿಕೆಯ ಮೂಲಕ ಕೇಂದ್ರ ಸರ್ಕಾರದ ನೀತಿಗಳು, ರಾಜ್ಯದ ಸಣ್ಣ ಹಳ್ಳಿಗಳ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವುದು ಉದ್ದೇಶ’ ಎಂದರು.