ಬೆಂಗಳೂರು: ‘ಬಿಜೆಪಿ ಸರ್ಕಾರದಲ್ಲಿನ ಭ್ರಷ್ಟಾಚಾರದ ಕುರಿತು ವಿರೋಧ ಪಕ್ಷದವರು ಟೀಕಿಸುವುದಕ್ಕಿಂತ, ಅವರ ಪಕ್ಷದವರೇ ಬಾಯಿ ಬಿಡುತ್ತಿದ್ದಾರೆ. ಜಲ ಸಂಪನ್ಮೂಲ ಇಲಾಖೆಯಲ್ಲಿ ₹ 22,200 ಕೋಟಿ ಮೊತ್ತದ ಕಾಮಗಾರಿಗಳಲ್ಲಿನ ಅಕ್ರಮದ ಕುರಿತು ಬಿಜೆಪಿ ಶಾಸಕ, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೂಳಿಹಟ್ಟಿ ಶೇಖರ್ ಆರೋಪಿಸಿರುವುದು ಸರ್ಕಾರದ ಲಜ್ಜೆಗೇಡಿತನವನ್ನು ಬಹಿರಂಗಗೊಳಿಸಿದೆ’ ಎಂದು ಜೆಡಿಎಸ್ ಹೇಳಿದೆ.