ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಎಸ್‌ಎಸ್‌ನ ಸಂವಿಧಾನ ವಿರೋಧಿ ಕೃತ್ಯಗಳ ಬಗ್ಗೆ ಬಿಜೆಪಿ ಯಾಕೆ ಮೌನ: ಜೆಡಿಎಸ್

Last Updated 20 ಅಕ್ಟೋಬರ್ 2021, 11:36 IST
ಅಕ್ಷರ ಗಾತ್ರ

ಬೆಂಗಳೂರು: ಆರ್‌ಎಸ್‌ಎಸ್‌ನ ಸಂವಿಧಾನ ವಿರೋಧಿ ಕೃತ್ಯಗಳ ಬಗ್ಗೆ ಬಿಜೆಪಿ ಯಾಕೆ ಮೌನವಹಿಸಿದೆ ಎಂದು ಜೆಡಿಎಸ್ ಪ್ರಶ್ನಿಸಿದೆ.

ಆರ್‌ಎಸ್‌ಎಸ್ ಬಗ್ಗೆ ಜೆಡಿಎಸ್ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಮಾಡಿರುವ ಆರೋಪಗಳನ್ನು ಸಮರ್ಥಿಸಿ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಿಂದ ಸರಣಿ ಟ್ವೀಟ್‌ಗಳನ್ನು ಮಾಡಲಾಗಿದೆ.

‘ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್ ಬಗ್ಗೆ ಕೆಲವು ಮೂಲಭೂತ ಪ್ರಶ್ನೆಗಳನ್ನು ಎತ್ತಿದ್ದರು. ಅವು ಸತ್ಯವೂ ಜನರಿಗೆ ತಿಳಿಯಲೇಬೇಕಾದ ತುರ್ತು ಅಂಶಗಳೂ ಹೌದು. ಇವುಗಳಲ್ಲಿ ಐಎಎಸ್ ಅಧಿಕಾರಿಗಳಿಗೆ ಸಂಘದ ವತಿಯಿಂದ ತರಬೇತಿ ನೀಡಿ ಕಳುಹಿಸಿದೆ ಎನ್ನುವುದೂ ಒಂದು ಅಂಶವಾಗಿದೆ’ ಎಂದು ಟ್ವೀಟ್‌ನಲ್ಲಿ ಜೆಡಿಎಸ್ ಉಲ್ಲೇಖಿಸಿದೆ.

‘ಕುಮಾರಸ್ವಾಮಿ ಅವರನ್ನು ಕೆಣಕಿರುವ ಬಿಜೆಪಿಯು ಆರ್‌ಎಸ್‌ಎಸ್‌ನ ಕಾನೂನು ಹಾಗೂ ಸಂವಿಧಾನ ವಿರೋಧಿ ಕೃತ್ಯಗಳ ಬಗ್ಗೆ ಯಾಕೆ ಮೌನ ವಹಿಸಿದೆ? ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳನ್ನು ದೇಶದ್ರೋಹಿಗಳು ಎಂದು ಕರೆಯಲಾಗುತ್ತದೆ. ಹಾಗಾದರೆ, ಆರ್‌ಎಸ್‌ಎಸ್‌ ಅನ್ನು ಏನೆಂದು ಕರೆಯಬೇಕು’ ಎಂದು ಜೆಡಿಎಸ್ ಪ್ರಶ್ನಿಸಿದೆ.

‘ಮಾಜಿ ಮುಖ್ಯಮಂತ್ರಿಗಳು ಎತ್ತಿದ್ದು ವೈಯಕ್ತಿಕ ವಿಷಯಗಳನ್ನಲ್ಲ. ಆದರೆ ಬಿಜೆಪಿ ಅವರ ವೈಯಕ್ತಿಕ ವಿಚಾರಗಳಲ್ಲಿ ಮೂಗು ತೂರಿಸಿದೆ. ಸದನದಲ್ಲಿಯೇ ತಮ್ಮ ಖಾಸಗಿ ಬದುಕಿನ ಬಗ್ಗೆ ಮಾತನಾಡುವ ಎದೆಗಾರಿಕೆ ತೋರಿದ ಕುಮಾರಸ್ವಾಮಿ ಅವರೆಲ್ಲಿ? ಅದೇ ಸದನದಲ್ಲಿ ನೀಚ ಕೃತ್ಯ ಎಸಗಿದ ಬಿಜೆಪಿ ನಾಯಕರು ಎಲ್ಲಿ? ಆತ್ಮಾವಲೋಕನ ಮಾಡಿಕೊಳ್ಳಿ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ವಿಜಯಪುರದಲ್ಲಿ ಮಂಗಳವಾರ ಆರ್‌ಎಸ್‌ಎಸ್ ಅನ್ನು ಟೀಕಿಸಿದ್ದ ಕುಮಾರಸ್ವಾಮಿ ಅವರು, ‘ನನಗೆ ಆರ್‌.ಎಸ್‌.ಎಸ್‌ ಸಹವಾಸ ಬೇಡ. ವಿಧಾನಸಭೆ ಕಲಾಪ ನಡೀತಿದ್ದರೆ ಅದೆಂಥದ್ದೋ ನೀಲಿ ಚಿತ್ರ ನೋಡಿಕೊಂಡು ಕೂರೋದು, ಈ ಥರಹದ್ದೇ ತಾನೆ ಅವರ ಶಾಖೆಯಲ್ಲಿ ಅವರಿಗೆ ಕಲಿಸಿದ್ದು. ಅದನ್ನು ಕಲಿಯಲು ಹೋಗಬೇಕಾ’ ಎಂದು ಪ್ರಶ್ನಿಸಿದ್ದರು. ಅಲ್ಲದೆ ಸಂಘದ ಕುರಿತು ಹಲವು ಪ್ರಶ್ನೆಗಳನ್ನು ಕೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT