ಬೆಂಗಳೂರು: ‘ಬಿಜೆಪಿ ಅಭ್ಯರ್ಥಿ ಮುನಿರತ್ನ ₹ 50 ಕೋಟಿಯಿಂದ ₹ 60 ಕೋಟಿಗೆ ತಮ್ಮನ್ನು ತಾವು ಮಾರಿಕೊಂಡಿ ದ್ದಾರೆ. ಮತ್ತೆ ಜನರ ಬಳಿ ಬಂದು ಮತ ಕೇಳುವ ನೈತಿಕತೆ ಅವರಿಗೆ ಇಲ್ಲ’ ಎಂದು ಆರ್.ಆರ್.ನಗರದ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ವಿ. ವಾಗ್ದಾಳಿ ನಡೆಸಿದರು.
ಯಶವಂತಪುರ ವಾರ್ಡ್ನಲ್ಲಿ ಸೋಮವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಶಾಸಕರಾಗಿದ್ದ ಅವಧಿಯಲ್ಲಿ ಮಾಡಿದ್ದ ತಪ್ಪುಗಳನ್ನು ಮುಚ್ಚಿಕೊಳ್ಳಲು ಮುನಿರತ್ನ ಬಿಜೆಪಿಗೆ ಹೋಗಿದ್ದಾರೆ’ ಎಂದು ಟೀಕಿಸಿದರು.
ಎರಡೂ ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಕಾರ್ಯಕರ್ತರನ್ನು ಸೆಳೆಯಲು ಪ್ರಯತ್ನ ನಡೆಸುತ್ತಿವೆ. ಪಕ್ಷದ ಕಾರ್ಯಕರ್ತರು ಯಾವುದೇ ಆಮಿಷಕ್ಕೆ ಒಳಗಾಗದೇ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಮನವಿ ಮಾಡಿದರು.