ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು, ‘ದಿ.ಎಂ.ಸಿ.ಮನಗೂಳಿ ಅವರು ನನ್ನ ಮತ್ತು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಪುತ್ರ ಅಶೋಕನನ್ನು ಕಾಂಗ್ರೆಸ್ಗೆ ಸೇರಿಸಿಕೊಂಡು ಬೆಳೆಸಲು ಮನವಿ ಮಾಡಿದ್ದರು. ಅವರ ಆಶಯದಂತೆ ಸೇರ್ಪಡೆ ಮಾಡಿಕೊಂಡು ಅಶೋಕ್ ಅವರಿಗೆ ಟಿಕೆಟ್ ನೀಡಿದ್ದೇವೆ. ಅವರ ಗೆಲ್ಲಿಸುವ ಜವಾಬ್ದಾರಿ ನಮ್ಮದು’ ಎಂದರು.