ಈ ಕುರಿತು ಗುರುವಾರ ಟ್ವೀಟ್ ಮಾಡಿರುವ ಅವರು, ‘ಜ.18ರಂದು ಪಕ್ಷದ ಪ್ರಮುಖರ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿದ ಬಳಿಕ ಹೊಸದಾಗಿ ಪ್ರಮುಖರ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಗುವುದು. ನಂತರ ರಾಜ್ಯ ಘಟಕದ ಪದಾಧಿಕಾರಿಗಳ ನೇಮಕ, ಕಂದಾಯ ವಿಭಾಗ, ಜಿಲ್ಲೆ, ತಾಲ್ಲೂಕು ಮತ್ತು ಮತಗಟ್ಟೆ ಹಂತದ ಸಮಿತಿಗಳ ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.