ನಂತರ ಈ ಬಗ್ಗೆ ಟ್ವೀಟ್ ಮಾಡಿರುವ ಎಚ್.ಡಿ ಕುಮಾರಸ್ವಾಮಿ, ‘ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ನೀಡಲು ಆಗ್ರಹಿಸಿ ಮನವಿ ಪತ್ರವನ್ನು ರಾಜ್ಯಪಾಲರ ಮೂಲಕ ರಾಷ್ಟ್ರಪತಿ, ಪ್ರಧಾನ ಮಂತ್ರಿಗಳಿಗೆ ರವಾನಿಸಲಾಗಿದೆ. ಈ ಹೋರಾಟ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರವಾಗಲಿದೆ. ಕನ್ನಡ ನಾಡಿನ ನುಡಿ, ನೆಲ, ಜಲ, ಗಡಿ ರಕ್ಷಣೆ ಜೆಡಿಎಸ್ನ ಆದ್ಯತೆ. ಅದೇ ನಮ್ಮ ಬದ್ಧತೆ,‘ ಎಂದು ಹೇಳಿದ್ದಾರೆ.