ಮಳವಳ್ಳಿಯಲ್ಲಿ ಗುರುವಾರ ಡಾ.ಬಿ.ಆರ್.ಅಂಬೇಡ್ಕರ್ ದಿನಾಚರಣೆ ಯಲ್ಲಿ ಮಾತನಾಡಿ, ‘ಅನೇಕ ದಲಿತ ನಾಯಕರಿಗೆ ಪಕ್ಷದಲ್ಲಿ, ಸರ್ಕಾರದ ಮಟ್ಟದಲ್ಲಿ ಜೆಡಿಎಸ್ ಉನ್ನತ ಹುದ್ದೆಗಳನ್ನು ನೀಡಿದೆ. ಮೀಸಲಾತಿ ಇಲ್ಲದ ಸಂದರ್ಭದಲ್ಲೇ, ಮೊದಲ ಬಾರಿಗೆ ಹಾಸನ ಜಿಲ್ಲಾ ಪಂಚಾಯಿತಿಗೆ ಆಯ್ಕೆಯಾಗಿದ್ದ ಎಚ್.ಡಿ.ರೇವಣ್ಣ ಅವರನ್ನು ಬಿಟ್ಟು, ಎಂ.ಎ ಪದವೀಧರರಾಗಿದ್ದ ದಲಿತ ಅಭ್ಯರ್ಥಿಯನ್ನು ಎಚ್.ಡಿ.ದೇವೇಗೌಡರು ಅಧ್ಯಕ್ಷರನ್ನಾಗಿಸಿದ್ದರು’ ಎಂದರು.