ಸ್ವಾತಂತ್ರ್ಯ ಹೋರಾಟದಲ್ಲಿ ನೆಹರೂ ಅವರ ಕೊಡುಗೆ ಸಾಕಷ್ಟಿದೆ. ಆದರೆ ಉದ್ದೇಶಪೂರ್ವಕವಾಗಿಯೇ ಕಡೆಗಣನೆ ಮಾಡಿರುವಂತಿದೆ. ನೆಹರೂ ಅವರು ಯಾವುದೇ ಪಕ್ಷಕ್ಕೆ ಸೇರಿರಲಿ, ಆದರೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅವರ ಕುಟುಂಬದ ಕೊಡುಗೆ ದೊಡ್ಡದು. ಅಂತಹವರ ಭಾವಚಿತ್ರವನ್ನು ಜಾಹೀರಾತಿನಲ್ಲಿ ಕೈಬಿಟ್ಟಿರುವುದು ಸಣ್ಣತನದ ರಾಜಕಾರಣ ಎಂದು ಕುಮಾರಸ್ವಾಮಿ ಹೇಳಿದ್ದಾರೆ.