<p><strong>ಚನ್ನಪಟ್ಟಣ:</strong> ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬುಧವಾರ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಶಾಂತಿಯುತವಾಗಿ ನಡೆಯಿತು.</p>.<p>ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭಗೊಂಡು ಸಂಜೆ 7 ಗಂಟೆಯಾದರೂ ಮುಂದುವರಿದಿತ್ತು. ತಾಲ್ಲೂಕಿನಲ್ಲಿ 434 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಒಟ್ಟು 1156 ಮಂದಿ ಅಂತಿಮ ಕಣದಲ್ಲಿದ್ದರು. ತಾಲ್ಲೂಕಿನಲ್ಲಿ ಒಟ್ಟು 70,144 ಪುರುಷರು, 71,800 ಮಹಿಳಾ ಮತದಾರರು ಸೇರಿ ಒಟ್ಟು 1,41,944 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು.</p>.<p>ಮತ ಎಣಿಕೆಗಾಗಿ 12 ಕೊಠಡಿಗಳಲ್ಲಿ 84 ಟೇಬಲ್ ವ್ಯವಸ್ಥೆ ಮಾಡಲಾಗಿತ್ತು. 92 ಮೇಲ್ವಿಚಾರಕರು, 184 ಮತ ಎಣಿಕೆ ಸಿಬ್ಬಂದಿಗಳನ್ನು ನೇಮಿಸಲಾಗಿತ್ತು. ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಸೂಕ್ತ ಬಂದೋಬಸ್ತ್ ನೊಂದಿಗೆ ಮತ ಎಣಿಕೆ ಕಾರ್ಯ ನಡೆಸಲಾಯಿತು.</p>.<p>ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭಗೊಂಡ ಹಿನ್ನೆಲೆಯಲ್ಲಿ 10 ಗಂಟೆಯ ವೇಳೆಗೆ ಫಲಿತಾಂಶ ಬರಲಾರಂಭಿಸಿತು. ಹೊರಗಡೆ ತಮ್ಮ ಅಭ್ಯರ್ಥಿಗಳ ಫಲಿತಾಂಶವನ್ನು ಕಾಣಲು ಕಿಕ್ಕಿರಿದ ಜನಸ್ತೋಮ ಕಾದು ಕುಳಿತಿತ್ತು. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಗೆದ್ದವರು ಪಟಾಕಿ ಸಿಡಿಸಿ, ಜೈಕಾರ ಹಾಕಿ, ಗೆದ್ದವರನ್ನು ಮೇಲೇತ್ತಿ ಸಂಭ್ರಮಿಸಿದರು.</p>.<p><strong>ಜೆಡಿಎಸ್ ಬೆಂಬಲಿತರ ಜಯಭೇರಿ</strong></p>.<p>32 ಗ್ರಾಮ ಪಂಚಾಯಿತಿಗಳಲ್ಲಿ 25 ಗ್ರಾಮ ಪಂಚಾಯಿತಿಯಲ್ಲಿ ಜೆಡಿಎಸ್ ಬೆಂಬಲಿತರು ಜಯಭೇರಿ ಬಾರಿಸಿದ್ದು, ಇಲ್ಲಿ ಜೆಡಿಎಸ್ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ.</p>.<p>ಉಳಿದಂತೆ ಬಿಜೆಪಿ ಬೆಂಬಲಿಗರು 5 ಪಂಚಾಯಿತಿಗಳಲ್ಲಿ ಬಹುಮತ ಪಡೆದಿದ್ದು, ಉಳಿದ 2 ಪಂಚಾಯಿತಿಗಳು ಅತಂತ್ರವಾಗುವ ಸಾಧ್ಯತೆ ಹೆಚ್ಚಾಗಿತ್ತು.</p>.<p><strong>ಫಲಿತಾಂಶ ವಿಶೇಷತೆ</strong><br /><br />ಬಿಜೆಪಿ ತಾಲ್ಲೂಕು ಅಧ್ಯಕ್ಷ ಸೋಲು: ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಟಿ.ಜಯರಾಂ ಅವರು 200 ಕ್ಕೂ ಹೆಚ್ಚು ಮತಗಳ ಅಂತರದಿಂದ ಪರಾಭವಗೊಂಡಿದ್ದಾರೆ.</p>.<p>ಬೇವೂರು ಗ್ರಾ.ಪಂ. ವ್ಯಾಪ್ತಿಯ ಕೆಲಗೆರೆ ಗ್ರಾಮದ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜಯರಾಂ ಅವರು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ರಂಗಸ್ವಾಮಿ ವಿರುದ್ಧ ಸೋಲು ಕಂಡಿದ್ದಾರೆ.</p>.<p>ಪುಟ್ಟಣ್ಣ ಸಹೋದರ ಸೋಲು: ತಾಲ್ಲೂಕಿನ ಎಲೆತೋಟದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಕನಹಳ್ಳಿ ಕ್ಷೇತ್ರದಲ್ಲಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರ ಸಹೋದರ ಕೆ.ಪಿ.ರಾಜು ಸೋಲು ಕಂಡಿದ್ದಾರೆ.</p>.<p>ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಾಜು ತಮ್ಮ ಪ್ರತಿಸ್ಪರ್ಧಿ ಜೆಡಿಎಸ್ ಬೆಂಬಲಿತ ಮರೀಗೌಡ ವಿರುದ್ಧ 19 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ರಾಜು ಅವರು ಕಳೆದ ಚುನಾವಣೆಯಲ್ಲಿ ಜಯಗಳಿಸಿ ಗ್ರಾ.ಪಂ. ಅಧ್ಯಕ್ಷರಾಗಿದ್ದರು.</p>.<p>ಪುಟ್ಟಣ್ಣ ಅವರ ಮತ್ತೊಬ್ಬ ಸಹೋದರ ಕಾಂತರಾಜು ಅವರು ಎಲೆತೋಟದಹಳ್ಳಿ ಗ್ರಾ.ಪಂ.ನ ಕರಲಹಳ್ಳಿ ಕ್ಷೇತ್ರದಿಂದ ಅವಿರೋಧ ಆಯ್ಕೆಯಾಗಿದ್ದಾರೆ.</p>.<p><strong>ಲಾಟರಿ ಮೂಲಕ ಆಯ್ಕೆ:</strong> ತಾಲ್ಲೂಕಿನ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಅಭ್ಯರ್ಥಿಗಳಿಬ್ಬರು ಸಮ ಮತಗಳನ್ನು ಪಡೆದ ಕಾರಣ ಲಾಟರಿ ಮೂಲಕ ಆಯ್ಕೆ ಮಾಡಲಾಯಿತು.</p>.<p>ತಾಲ್ಲೂಕಿನ ಎಂ.ಬಿ.ಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಗನೂರು ಕ್ಷೇತ್ರದಲ್ಲಿ ರಾಮದಾಸೇಗೌಡ ಹಾಗೂ ವೆಂಕಟಗಿರಿಗೌಡ ತಲಾ 113 ಮತ ಪಡೆದು ಸಮಬಲ ಸಾಧಿಸಿದ್ದರು. ಆಗ ಚುನಾವಣಾಧಿಕಾರಿ ಸಮ್ಮುಖದಲ್ಲಿ ಲಾಟರಿ ಎತ್ತಲಾಯಿತು. ಲಾಟರಿಯಲ್ಲಿ ರಾಮದಾಸೇಗೌಡ ಅವರಿಗೆ ಜಯಲಕ್ಷ್ಮಿ ಒಲಿಯಿತು.</p>.<p>ಹಾಗೆಯೆ ತಾಲ್ಲೂಕಿನ ತಿಟ್ಟಮಾರನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಕೋಟಮಾರನಹಳ್ಳಿ ಕ್ಷೇತ್ರದಲ್ಲಿ ನಾಗಮ್ಮ ಹಾಗೂ ಜ್ಯೋತಿ ಸ್ಪರ್ಧಿಸಿದ್ದರು. ಇಬ್ಬರು 258 ಮತ ಪಡೆದಿದ್ದರು. ಈ ಕ್ಷೇತ್ರದಲ್ಲಿ ಮರು ಎಣಿಕೆ ಮಾಡಲಾಯಿತು. ಆಗಲೂ 258 ಮತ ಬಂದ ಕಾರಣ ಲಾಟರಿ ಮೂಲಕ ಆಯ್ಕೆ ಮಾಡಲಾಯಿತು. ಲಾಟರಿಯಲ್ಲಿ ನಾಗಮ್ಮ ಅವರಿಗೆ ಜಯ ಒಲಿಯಿತು.</p>.<p><strong>ಮಂಗಳಮುಖಿ ಗೆಲುವು:</strong> ತಾಲ್ಲೂಕಿನ ಕೂಡ್ಲೂರು ಗ್ರಾಮ ಪಂಚಾಯಿತಿಯ ಕೂಡ್ಲೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಂಗಳಮುಖಿಯೊಬ್ಬರು ಗೆಲುವು ಸಾಧಿಸಿದ್ದಾರೆ.</p>.<p>ಮಂಗಳಮುಖಿ ಮಮತ ಅವರು ಜೆಡಿಎಸ್ ಬೆಂಬಲಿತರಾಗಿ ಸ್ಪರ್ಧಿಸಿ ಗೆಲುವು ಪಡೆದಿದ್ದಾರೆ. ಇವರು 2015 ರಲ್ಲಿ ನಡೆದಿದ್ದ ಗ್ರಾ.ಪಂ. ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬುಧವಾರ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಶಾಂತಿಯುತವಾಗಿ ನಡೆಯಿತು.</p>.<p>ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭಗೊಂಡು ಸಂಜೆ 7 ಗಂಟೆಯಾದರೂ ಮುಂದುವರಿದಿತ್ತು. ತಾಲ್ಲೂಕಿನಲ್ಲಿ 434 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಒಟ್ಟು 1156 ಮಂದಿ ಅಂತಿಮ ಕಣದಲ್ಲಿದ್ದರು. ತಾಲ್ಲೂಕಿನಲ್ಲಿ ಒಟ್ಟು 70,144 ಪುರುಷರು, 71,800 ಮಹಿಳಾ ಮತದಾರರು ಸೇರಿ ಒಟ್ಟು 1,41,944 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು.</p>.<p>ಮತ ಎಣಿಕೆಗಾಗಿ 12 ಕೊಠಡಿಗಳಲ್ಲಿ 84 ಟೇಬಲ್ ವ್ಯವಸ್ಥೆ ಮಾಡಲಾಗಿತ್ತು. 92 ಮೇಲ್ವಿಚಾರಕರು, 184 ಮತ ಎಣಿಕೆ ಸಿಬ್ಬಂದಿಗಳನ್ನು ನೇಮಿಸಲಾಗಿತ್ತು. ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಸೂಕ್ತ ಬಂದೋಬಸ್ತ್ ನೊಂದಿಗೆ ಮತ ಎಣಿಕೆ ಕಾರ್ಯ ನಡೆಸಲಾಯಿತು.</p>.<p>ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭಗೊಂಡ ಹಿನ್ನೆಲೆಯಲ್ಲಿ 10 ಗಂಟೆಯ ವೇಳೆಗೆ ಫಲಿತಾಂಶ ಬರಲಾರಂಭಿಸಿತು. ಹೊರಗಡೆ ತಮ್ಮ ಅಭ್ಯರ್ಥಿಗಳ ಫಲಿತಾಂಶವನ್ನು ಕಾಣಲು ಕಿಕ್ಕಿರಿದ ಜನಸ್ತೋಮ ಕಾದು ಕುಳಿತಿತ್ತು. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಗೆದ್ದವರು ಪಟಾಕಿ ಸಿಡಿಸಿ, ಜೈಕಾರ ಹಾಕಿ, ಗೆದ್ದವರನ್ನು ಮೇಲೇತ್ತಿ ಸಂಭ್ರಮಿಸಿದರು.</p>.<p><strong>ಜೆಡಿಎಸ್ ಬೆಂಬಲಿತರ ಜಯಭೇರಿ</strong></p>.<p>32 ಗ್ರಾಮ ಪಂಚಾಯಿತಿಗಳಲ್ಲಿ 25 ಗ್ರಾಮ ಪಂಚಾಯಿತಿಯಲ್ಲಿ ಜೆಡಿಎಸ್ ಬೆಂಬಲಿತರು ಜಯಭೇರಿ ಬಾರಿಸಿದ್ದು, ಇಲ್ಲಿ ಜೆಡಿಎಸ್ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ.</p>.<p>ಉಳಿದಂತೆ ಬಿಜೆಪಿ ಬೆಂಬಲಿಗರು 5 ಪಂಚಾಯಿತಿಗಳಲ್ಲಿ ಬಹುಮತ ಪಡೆದಿದ್ದು, ಉಳಿದ 2 ಪಂಚಾಯಿತಿಗಳು ಅತಂತ್ರವಾಗುವ ಸಾಧ್ಯತೆ ಹೆಚ್ಚಾಗಿತ್ತು.</p>.<p><strong>ಫಲಿತಾಂಶ ವಿಶೇಷತೆ</strong><br /><br />ಬಿಜೆಪಿ ತಾಲ್ಲೂಕು ಅಧ್ಯಕ್ಷ ಸೋಲು: ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಟಿ.ಜಯರಾಂ ಅವರು 200 ಕ್ಕೂ ಹೆಚ್ಚು ಮತಗಳ ಅಂತರದಿಂದ ಪರಾಭವಗೊಂಡಿದ್ದಾರೆ.</p>.<p>ಬೇವೂರು ಗ್ರಾ.ಪಂ. ವ್ಯಾಪ್ತಿಯ ಕೆಲಗೆರೆ ಗ್ರಾಮದ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜಯರಾಂ ಅವರು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ರಂಗಸ್ವಾಮಿ ವಿರುದ್ಧ ಸೋಲು ಕಂಡಿದ್ದಾರೆ.</p>.<p>ಪುಟ್ಟಣ್ಣ ಸಹೋದರ ಸೋಲು: ತಾಲ್ಲೂಕಿನ ಎಲೆತೋಟದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಕನಹಳ್ಳಿ ಕ್ಷೇತ್ರದಲ್ಲಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರ ಸಹೋದರ ಕೆ.ಪಿ.ರಾಜು ಸೋಲು ಕಂಡಿದ್ದಾರೆ.</p>.<p>ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಾಜು ತಮ್ಮ ಪ್ರತಿಸ್ಪರ್ಧಿ ಜೆಡಿಎಸ್ ಬೆಂಬಲಿತ ಮರೀಗೌಡ ವಿರುದ್ಧ 19 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ರಾಜು ಅವರು ಕಳೆದ ಚುನಾವಣೆಯಲ್ಲಿ ಜಯಗಳಿಸಿ ಗ್ರಾ.ಪಂ. ಅಧ್ಯಕ್ಷರಾಗಿದ್ದರು.</p>.<p>ಪುಟ್ಟಣ್ಣ ಅವರ ಮತ್ತೊಬ್ಬ ಸಹೋದರ ಕಾಂತರಾಜು ಅವರು ಎಲೆತೋಟದಹಳ್ಳಿ ಗ್ರಾ.ಪಂ.ನ ಕರಲಹಳ್ಳಿ ಕ್ಷೇತ್ರದಿಂದ ಅವಿರೋಧ ಆಯ್ಕೆಯಾಗಿದ್ದಾರೆ.</p>.<p><strong>ಲಾಟರಿ ಮೂಲಕ ಆಯ್ಕೆ:</strong> ತಾಲ್ಲೂಕಿನ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಅಭ್ಯರ್ಥಿಗಳಿಬ್ಬರು ಸಮ ಮತಗಳನ್ನು ಪಡೆದ ಕಾರಣ ಲಾಟರಿ ಮೂಲಕ ಆಯ್ಕೆ ಮಾಡಲಾಯಿತು.</p>.<p>ತಾಲ್ಲೂಕಿನ ಎಂ.ಬಿ.ಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಗನೂರು ಕ್ಷೇತ್ರದಲ್ಲಿ ರಾಮದಾಸೇಗೌಡ ಹಾಗೂ ವೆಂಕಟಗಿರಿಗೌಡ ತಲಾ 113 ಮತ ಪಡೆದು ಸಮಬಲ ಸಾಧಿಸಿದ್ದರು. ಆಗ ಚುನಾವಣಾಧಿಕಾರಿ ಸಮ್ಮುಖದಲ್ಲಿ ಲಾಟರಿ ಎತ್ತಲಾಯಿತು. ಲಾಟರಿಯಲ್ಲಿ ರಾಮದಾಸೇಗೌಡ ಅವರಿಗೆ ಜಯಲಕ್ಷ್ಮಿ ಒಲಿಯಿತು.</p>.<p>ಹಾಗೆಯೆ ತಾಲ್ಲೂಕಿನ ತಿಟ್ಟಮಾರನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಕೋಟಮಾರನಹಳ್ಳಿ ಕ್ಷೇತ್ರದಲ್ಲಿ ನಾಗಮ್ಮ ಹಾಗೂ ಜ್ಯೋತಿ ಸ್ಪರ್ಧಿಸಿದ್ದರು. ಇಬ್ಬರು 258 ಮತ ಪಡೆದಿದ್ದರು. ಈ ಕ್ಷೇತ್ರದಲ್ಲಿ ಮರು ಎಣಿಕೆ ಮಾಡಲಾಯಿತು. ಆಗಲೂ 258 ಮತ ಬಂದ ಕಾರಣ ಲಾಟರಿ ಮೂಲಕ ಆಯ್ಕೆ ಮಾಡಲಾಯಿತು. ಲಾಟರಿಯಲ್ಲಿ ನಾಗಮ್ಮ ಅವರಿಗೆ ಜಯ ಒಲಿಯಿತು.</p>.<p><strong>ಮಂಗಳಮುಖಿ ಗೆಲುವು:</strong> ತಾಲ್ಲೂಕಿನ ಕೂಡ್ಲೂರು ಗ್ರಾಮ ಪಂಚಾಯಿತಿಯ ಕೂಡ್ಲೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಂಗಳಮುಖಿಯೊಬ್ಬರು ಗೆಲುವು ಸಾಧಿಸಿದ್ದಾರೆ.</p>.<p>ಮಂಗಳಮುಖಿ ಮಮತ ಅವರು ಜೆಡಿಎಸ್ ಬೆಂಬಲಿತರಾಗಿ ಸ್ಪರ್ಧಿಸಿ ಗೆಲುವು ಪಡೆದಿದ್ದಾರೆ. ಇವರು 2015 ರಲ್ಲಿ ನಡೆದಿದ್ದ ಗ್ರಾ.ಪಂ. ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>