ಸಭೆಯ ಬಳಿಕ ಪತ್ರಕರ್ತರ ಜತೆ ಮಾತನಾಡಿದ ಕುಮಾರಸ್ವಾಮಿ, ‘ಮೊದಲಿನಿಂದಲೂ ಶಿರಾ ಕ್ಷೇತ್ರ ಜೆಡಿಎಸ್ನ ಭದ್ರಕೋಟೆ. ಈಗ ಉಪ ಚುನಾವಣೆ ನಡೆಯುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಆಗಲೇ ಸಿದ್ಧತೆ ನಡೆಸುತ್ತಿವೆ. ಬಿಜೆಪಿಯವರು ಅಧಿಕಾರದಲ್ಲಿದ್ದು, ಉಪ ಚುನಾವಣೆಯಲ್ಲಿ ಆಮಿಷ ಒಡ್ಡಿ, ಆಡಳಿತ ಯಂತ್ರ ದುರ್ಬಳಕೆ ಮಾಡಿಕೊಂಡು ಗೆಲುವು ಸಾಧಿಸುತ್ತಾರೆ. ಈ ಬಾರಿ ಅಂತಹ ಪ್ರಯತ್ನ ಸಫಲವಾಗದಂತೆ ತಡೆಯುವುದು ನಮ್ಮ ಗುರಿ’ ಎಂದರು.