‘ಅಂಬರೀಷ್ ಬೆಂಬಲಿಗರು ಗಣಿಗಾರಿಕೆ, ಜಲ್ಲಿ ಕ್ರಷರ್ ನಡೆಸುತ್ತಿದ್ದರು ಎಂಬ ನನ್ನ ಹೇಳಿಕೆಯನ್ನು ಸುಮಲತಾ ತಿರುಚಿದ್ದು, ಅಂಬರೀಷ್ ಬಗ್ಗೆ ಮಾತನಾಡಿದರೆ ನಾಶವಾಗಿ ಹೋಗುತ್ತಾರೆ ಎಂದಿದ್ದಾರೆ. ಕೆಆರ್ಎಸ್ ಅಣೆಕಟ್ಟೆ ಬಿರುಕು ಬಿಟ್ಟಿದೆ ಎಂದು ಸುಳ್ಳು ಹೇಳಿ ಪೇಚಿಗೆ ಸಿಲುಕಿ ಈಗ ಅಧಿಕಾರಿಗಳ ವರ್ಗಾವಣೆ, ಅಕ್ರಮ ಗಣಿಗಾರಿಕೆ ಎಂದು ಏನೇನೋ ಮಾತನಾಡುತ್ತಿದ್ದಾರೆ. ಸುಳ್ಳು ಹೇಳಿದ ತಪ್ಪಿಗೆ ಕೆಆರ್ಎಸ್ ಬಳಿಯ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ ಜನರ ಕ್ಷಮೆ ಕೇಳಲಿ’ ಎಂದು ಆಗ್ರಹಿಸಿದರು.