ವಿಧಾನಸಭೆಯಲ್ಲಿ ಜೆಡಿಎಸ್ ಮುಖ್ಯ ಸಚೇತಕರಾಗಿರುವ ವೆಂಕಟರಾವ್ ನಾಡಗೌಡ ಅವರು ವಿಧಾನಸಭೆಯ ಅಧ್ಯಕ್ಷರಿಗೆ ದೂರು ನೀಡಿದರು. ಇಬ್ಬರೂ ಶಾಸಕರು ಪಕ್ಷದ ವಿರುದ್ಧ ಹೇಳಿಕೆ ನೀಡಿರುವುದು, ರಾಜ್ಯಸಭೆ ಚುನಾವಣೆಯಲ್ಲಿ ಅನ್ಯ ಪಕ್ಷಗಳ ಅಭ್ಯರ್ಥಿಗಳಿಗೆ ಮತ ಚಾಲಯಿಸಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ದೂರಿನೊಂದಿಗೆ ಲಗತ್ತಿಸಿದ್ದು, ಇಬ್ಬರನ್ನೂ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಮನವಿ ಮಾಡಿದ್ದಾರೆ.