<p><strong>ಬೆಂಗಳೂರು: </strong>ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸುವ ಮೂಲಕ ರಾಜ್ಯ ಸರ್ಕಾರ ಅವರ ಬೇಡಿಕೆಯನ್ನು ತಕ್ಷಣ ಈಡೇರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡ ಮತ್ತು ಎಸ್.ಎಲ್. ಭೋಜೇಗೌಡ ಆಗ್ರಹಿಸಿದರು.</p>.<p>ಜೆಡಿಎಸ್ ಪ್ರಧಾನ ಕಚೇರಿ ಜೆ.ಪಿ. ಭವನದಲ್ಲಿ ಬುಧವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸೇವಾ ಭದ್ರತೆಗೆ ಒತ್ತಾಯಿಸಿ ಧರಣಿ ನಡೆಸುತ್ತಿರುವ ಉಪನ್ಯಾಸಕರ ಬೇಡಿಕೆ ನ್ಯಾಯಯುತವಾಗಿದೆ. ಅವರಿಗೆ ಅನ್ಯಾಯ ಆಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಕರ್ತವ್ಯಕ್ಕೆ ಸೇರಿದ ದಿನದಿಂದಲೇ ಅವರ ಸೇವೆಯನ್ನು ಕಾಯಂಗೊಳಿಸಬೇಕು. ಸೇವಾ ಭದ್ರತೆ ಆದೇಶ ಹೊರಡಿಸುವ ಮುನ್ನವೇ ಈ ಕುರಿತು ಸ್ಪಷ್ಟ ಆದೇಶ ಪ್ರಕಟಿಸಬೇಕು’ ಎಂದು ಶ್ರೀಕಂಠೇಗೌಡ ಹೇಳಿದರು.</p>.<p>‘ಶಾಲೆಗಳ ಮಾನ್ಯತೆ ನವೀಕರಣ, ಉಪನ್ಯಾಸಕರ ಸೇವೆ ಕಾಯಂ ಸೇರಿದಂತೆ ಶಿಕ್ಷಣ ಕ್ಷೇತ್ರದ ಎಲ್ಲ ಸಮಸ್ಯೆಗಳಿಗೂ ಸರ್ಕಾರ ಸ್ಪಂದಿಸಬೇಕು. ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಗೆ ನೋಟಿಸ್ ಜಾರಿಗೊಳಿಸಿ, ಕಿರುಕುಳ ನೀಡುತ್ತಿರುವುದನ್ನು ನಿಲ್ಲಿಸಬೇಕು’ ಎಂದು ಭೋಜೇಗೌಡ ಒತ್ತಾಯಿಸಿದರು.</p>.<p>ಕೋವಿಡ್ ಕಾರಣದಿಂದ ಮತ್ತೆ ಶಾಲೆಗಳನ್ನು ಬಂದ್ ಮಾಡುವ ನಿರ್ಧಾರ ಸರಿಯಲ್ಲ. ಇದರಿಂದ ವಿದ್ಯಾರ್ಥಿಗಳು, ಶಿಕ್ಷಕರು ಸಂಕಷ್ಟಕ್ಕೆ ಸಿಲುಕುತ್ತಾರೆ. ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿ ಬೀದಿಗೆ ಬೀಳುವ ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸುವ ಮೂಲಕ ರಾಜ್ಯ ಸರ್ಕಾರ ಅವರ ಬೇಡಿಕೆಯನ್ನು ತಕ್ಷಣ ಈಡೇರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡ ಮತ್ತು ಎಸ್.ಎಲ್. ಭೋಜೇಗೌಡ ಆಗ್ರಹಿಸಿದರು.</p>.<p>ಜೆಡಿಎಸ್ ಪ್ರಧಾನ ಕಚೇರಿ ಜೆ.ಪಿ. ಭವನದಲ್ಲಿ ಬುಧವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸೇವಾ ಭದ್ರತೆಗೆ ಒತ್ತಾಯಿಸಿ ಧರಣಿ ನಡೆಸುತ್ತಿರುವ ಉಪನ್ಯಾಸಕರ ಬೇಡಿಕೆ ನ್ಯಾಯಯುತವಾಗಿದೆ. ಅವರಿಗೆ ಅನ್ಯಾಯ ಆಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಕರ್ತವ್ಯಕ್ಕೆ ಸೇರಿದ ದಿನದಿಂದಲೇ ಅವರ ಸೇವೆಯನ್ನು ಕಾಯಂಗೊಳಿಸಬೇಕು. ಸೇವಾ ಭದ್ರತೆ ಆದೇಶ ಹೊರಡಿಸುವ ಮುನ್ನವೇ ಈ ಕುರಿತು ಸ್ಪಷ್ಟ ಆದೇಶ ಪ್ರಕಟಿಸಬೇಕು’ ಎಂದು ಶ್ರೀಕಂಠೇಗೌಡ ಹೇಳಿದರು.</p>.<p>‘ಶಾಲೆಗಳ ಮಾನ್ಯತೆ ನವೀಕರಣ, ಉಪನ್ಯಾಸಕರ ಸೇವೆ ಕಾಯಂ ಸೇರಿದಂತೆ ಶಿಕ್ಷಣ ಕ್ಷೇತ್ರದ ಎಲ್ಲ ಸಮಸ್ಯೆಗಳಿಗೂ ಸರ್ಕಾರ ಸ್ಪಂದಿಸಬೇಕು. ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಗೆ ನೋಟಿಸ್ ಜಾರಿಗೊಳಿಸಿ, ಕಿರುಕುಳ ನೀಡುತ್ತಿರುವುದನ್ನು ನಿಲ್ಲಿಸಬೇಕು’ ಎಂದು ಭೋಜೇಗೌಡ ಒತ್ತಾಯಿಸಿದರು.</p>.<p>ಕೋವಿಡ್ ಕಾರಣದಿಂದ ಮತ್ತೆ ಶಾಲೆಗಳನ್ನು ಬಂದ್ ಮಾಡುವ ನಿರ್ಧಾರ ಸರಿಯಲ್ಲ. ಇದರಿಂದ ವಿದ್ಯಾರ್ಥಿಗಳು, ಶಿಕ್ಷಕರು ಸಂಕಷ್ಟಕ್ಕೆ ಸಿಲುಕುತ್ತಾರೆ. ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿ ಬೀದಿಗೆ ಬೀಳುವ ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>