<p><strong>ಹನೂರು:</strong> ‘ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿ’ ಎಂದು ಹರಕೆ ಹೊತ್ತ ತುಮಕೂರು ಜಿಲ್ಲೆಯ ಮೂವರು ಅಭಿಮಾನಿಗಳು ಪಾದಯಾತ್ರೆ ಮೂಲಕ ಮಹದೇಶ್ವರ ಬೆಟ್ಟಕ್ಕೆ ತೆರಳಿದರು.</p>.<p>ಮಧುಗಿರಿ ತಾಲ್ಲೂಕಿನ ಶ್ರಾವಂಡನಹಳ್ಳಿಯ ಎಸ್.ಎ. ಅಶೋಕ್, ಜಗನ್ನಾಥ್, ಮೂರ್ತಿ ಎಂಬುವವರು ಯುಗಾದಿಯಂದು ಪಾದಯಾತ್ರೆ ಆರಂಭಿಸಿದ್ದು, ಗುರುವಾರ ಪಟ್ಟಣ ತಲುಪಿದರು.</p>.<p>‘ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು. ಮಧುಗಿರಿ ಕ್ಷೇತ್ರದಲ್ಲಿ ವೀರಭದ್ರಯ್ಯ, ಗೌರಿಬಿದನೂರು ಕ್ಷೇತ್ರದಲ್ಲಿ ನರಸಿಂಹಮೂರ್ತಿ ಜಯಗಳಿಸಬೇಕು’ ಎಂದು ಹರಕೆ ಹೊತ್ತಿದ್ದಾರೆ.</p>.<p>‘ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡಿದ್ದರು. ಲಾಟರಿ, ಸಾರಾಯಿ ನಿಷೇಧಿಸಿ ರಾಜ್ಯದ ಮಹಿಳೆಯರ ಕಣ್ಣೀರೊರೆಸಿದ್ದರು. ಅವರು ಮುಖ್ಯಮಂತ್ರಿಯಾದರೆ ರಾಜ್ಯದ ಸಮಗ್ರ ಅಭಿವೃದ್ಧಿಯಾಗುತ್ತದೆ’ ಎಂದು ಅಶೋಕ ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು:</strong> ‘ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿ’ ಎಂದು ಹರಕೆ ಹೊತ್ತ ತುಮಕೂರು ಜಿಲ್ಲೆಯ ಮೂವರು ಅಭಿಮಾನಿಗಳು ಪಾದಯಾತ್ರೆ ಮೂಲಕ ಮಹದೇಶ್ವರ ಬೆಟ್ಟಕ್ಕೆ ತೆರಳಿದರು.</p>.<p>ಮಧುಗಿರಿ ತಾಲ್ಲೂಕಿನ ಶ್ರಾವಂಡನಹಳ್ಳಿಯ ಎಸ್.ಎ. ಅಶೋಕ್, ಜಗನ್ನಾಥ್, ಮೂರ್ತಿ ಎಂಬುವವರು ಯುಗಾದಿಯಂದು ಪಾದಯಾತ್ರೆ ಆರಂಭಿಸಿದ್ದು, ಗುರುವಾರ ಪಟ್ಟಣ ತಲುಪಿದರು.</p>.<p>‘ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು. ಮಧುಗಿರಿ ಕ್ಷೇತ್ರದಲ್ಲಿ ವೀರಭದ್ರಯ್ಯ, ಗೌರಿಬಿದನೂರು ಕ್ಷೇತ್ರದಲ್ಲಿ ನರಸಿಂಹಮೂರ್ತಿ ಜಯಗಳಿಸಬೇಕು’ ಎಂದು ಹರಕೆ ಹೊತ್ತಿದ್ದಾರೆ.</p>.<p>‘ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡಿದ್ದರು. ಲಾಟರಿ, ಸಾರಾಯಿ ನಿಷೇಧಿಸಿ ರಾಜ್ಯದ ಮಹಿಳೆಯರ ಕಣ್ಣೀರೊರೆಸಿದ್ದರು. ಅವರು ಮುಖ್ಯಮಂತ್ರಿಯಾದರೆ ರಾಜ್ಯದ ಸಮಗ್ರ ಅಭಿವೃದ್ಧಿಯಾಗುತ್ತದೆ’ ಎಂದು ಅಶೋಕ ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>