‘ರಾಜರಾಜೇಶ್ವರಿ ನಗರದಲ್ಲಿ ಪಕ್ಷದ ಮತಗಳಿವೆ. ಕಾರ್ಯಕರ್ತರು ಇದನ್ನು ಮರೆಯಬಾರದು. ಅಧಿಕಾರ ಇದ್ದಾಗ ನಾವು ಅಕ್ರಮವಾಗಿ ಹಣ ಮಾಡಿಲ್ಲ. ಮೂವರು ಶಾಸಕರು ನಮ್ಮ ಪಕ್ಷದವರಿದ್ದರು. ಅವರೂ ಬೇರೆ ಕಡೆ ಹೋಗಿದ್ದಾರೆ. ಚಾಮರಾಜಪೇಟೆಯಲ್ಲಿ ನಮ್ಮ ನಾಯಕರು ಹೋರಾಟ ಮಾಡಿದರು. ಅದರಿಂದಾಗಿ ಚಾಮರಾಜಪೇಟೆ, ಪುಲಕೇಶಿನಗರ, ಮಹಾಲಕ್ಷ್ಮಿ ಲೇಔಟ್ ಗಳಲ್ಲೂ ಗೆದ್ದೆವು. ಪಕ್ಷ ಉಳಿದರೆ ನಾವೆಲ್ಲಾ ಉಳಿಯುತ್ತೇವೆ ಎಂಬುದನ್ನು ಕಾರ್ಯಕರ್ತರು ಅರ್ಥ ಮಾಡಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.