ಬೆಂಗಳೂರು: ಮಾರ್ಚ್ 30ರಂದು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಹಿರಂಗ ಪ್ರಚಾರ ಸಭೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಬಣ್ಣದ ಕುರಿತು ‘ಕಾಲಾ ಕುಮಾರಸ್ವಾಮಿ’ ಎಂಬ ಪದ ಬಳಕೆ ಮಾಡಿರುವ ಕಾಂಗ್ರೆಸ್ ಶಾಸಕ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜೆಡಿಎಸ್ ಯುವ ಘಟಕ ಬೆಂಗಳೂರು ನಗರ ಪೊಲೀಸ್ ಕಮಿಷನರ್ಗೆ ದೂರು ಸಲ್ಲಿಸಿದೆ.
ಬೆಂಗಳೂರು ಮಹಾನಗರ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಎ.ಎಂ. ಪ್ರವೀಣ್ ಕುಮಾರ್ ನೇತೃತ್ವದ ನಿಯೋಗ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರನ್ನು ಸೋಮವಾರ ಭೇಟಿಮಾಡಿ ದೂರು ಸಲ್ಲಿಸಿತು. ಜಮೀರ್ ಅಹಮ್ಮದ್ ಅವರು ಮಾ.30ರಂದು ಮಾಡಿರುವ ಭಾಷಣದ ದೃಶ್ಯಾವಳಿ ಇರುವ ಸಿ.ಡಿಯನ್ನೂ ದೂರಿನೊಂದಿಗೆ ನೀಡಿತು.
‘ಕಾಲಾ ಕುಮಾರಸ್ವಾಮಿ ಎನ್ನುವ ಮೂಲಕ ಜಮೀರ್ ಅಹಮ್ಮದ್ ಅವರು ಕುಮಾರಸ್ವಾಮಿ ಅವರ ಮೈಬಣ್ಣದ ಕುರಿತು ಕೀಳಾಗಿ ಮಾತನಾಡಿದ್ದಾರೆ. ಅವರ ಹೇಳಿಕೆ ಜನಾಂಗೀಯ ನಿಂದನೆ ವ್ಯಾಪ್ತಿಗೆ ಬರುತ್ತದೆ. ಜಮೀರ್ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು’ ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.