ದೇವೇಗೌಡರು ಸೋನಿಯಾ ಗಾಂಧಿ ಜತೆ ಮಾತನಾಡಿ, ಬೆಂಬಲ ಕೋರಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಜತೆ ಚರ್ಚಿಸಿದ್ದಾರೆ. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಶಾಸಕ ಆರ್.ವಿ. ದೇಶಪಾಂಡೆ ಸೇರಿದಂತೆ ಹಲವು ಮುಖಂಡರ ಜತೆ ಜೆಡಿಎಸ್ ಪ್ರಮುಖರು ಮಾತುಕತೆ ನಡೆಸಿದ್ದಾರೆ. ಸಂಪೂರ್ಣ ಭರವಸೆ ಸಿಕ್ಕ ಬಳಿಕವೇ ಕುಪೇಂದ್ರ ರೆಡ್ಡಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದೆ ಎಂದರು.