ಈ ಘಟನೆಯಿಂದ ರಾಜ್ಯವೇ ತಲೆ ತಗ್ಗಿಸುವಂತಾಗಿದ್ದು, ನೈತಿಕತೆ ಇದ್ದರೆ ಗೃಹ ಸಚಿವ ಅರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು. ನಿರ್ಜನ ಪ್ರದೇಶಕ್ಕೆ ರಾತ್ರಿ ಯುವತಿ ಹೋಗಬಾರದಿತ್ತು ಎಂಬ ಸಚಿವರ ಹೇಳಿಕೆ ಸರಿಯಲ್ಲ. ಹೆಣ್ಣು ಮಕ್ಕಳು ಸಂಜೆ 6 ಗಂಟೆ ನಂತರ ಮನೆಯಿಂದ ಹೊರಗೆ ಹೋಗುವಂತಿಲ್ಲ ಎಂಬ ಆದೇಶ ಹೊರಡಿಸಲಿ. ಇಲಾಖೆಯ ವೈಫಲ್ಯ ಮುಚ್ಚಿ ಹಾಕಲು ಈ ರೀತಿ ಹೇಳುವುದು ಸರಿಯಲ್ಲ ಎಂದರು.