<p><strong>ಸಿಂಧನೂರು (ರಾಯಚೂರು ಜಿಲ್ಲೆ): </strong>ರಾಯಚೂರು–ಕೊಪ್ಪಳ ವಿಧಾನ ಪರಿಷತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರಣೇಗೌಡ ಬಯ್ಯಾಪುರ ಅವರಿಗೆ ಜೆಡಿಎಸ್ ಬೆಂಬಲ ಘೋಷಿಸಿದೆ.</p>.<p>ಸೋಮವಾರ ನಡೆದ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ ಮತ್ತು ನಗರಸಭೆ ಸದಸ್ಯರ ಸಭೆಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಈ ಘೋಷಣೆ ಮಾಡಿದರು.</p>.<p>‘ಶರಣೇಗೌಡ ಬಯ್ಯಾಪುರ ಅವರು ಅತ್ಯಂತ ಸರಳ ವ್ಯಕ್ತಿಯಾಗಿದ್ದು, ಗ್ರಾಮ ಪಂಚಾಯಿತಿ ಮತ್ತು ನಗರಸಭೆ ಸದಸ್ಯರ ಸಮಸ್ಯೆಗಳ ಅರಿವು ಇದೆ. ಅವರನ್ನು ವಿಧಾನ ಪರಿಷತ್ಗೆ ಆಯ್ಕೆ ಮಾಡಬೇಕು’ ಎಂದು ಕೋರಿದರು.</p>.<p>‘ಶರಣೇಗೌಡ ಬಯ್ಯಾಪುರ ಅವರನ್ನು ಬೆಂಬಲಿಸಲು ಎಚ್.ಡಿ.ಕುಮಾರಸ್ವಾಮಿ ಅವರು ಅನುಮತಿ ನೀಡಿದ್ದಾರೆ. ಹೀಗಾಗಿ ಇವರಿಗೆ ಬೆಂಬಲ ನೀಡಬೇಕು‘ ಎಂದರು.</p>.<p>‘ಚುನಾವಣೆ ಪ್ರಕ್ರಿಯೆ ಆರಂಭಗೊಂಡು ಇಷ್ಟು ದಿನಗಳಾದರೂ ಈವರೆಗೆ ಬಿಜೆಪಿ ಅಭ್ಯರ್ಥಿ ಅಥವಾ ಆ ಪಕ್ಷದ ಮುಖಂಡರು ನಮ್ಮನ್ನು ಸಂಪರ್ಕಿಸಿಲ್ಲ. ನಮ್ಮ ಕಾರ್ಯಕರ್ತರಲ್ಲೇ ಒಡಕುಂಟು ಮಾಡಲು ಪ್ರಯತ್ನಿಸುತ್ತಿದ್ದಾರೆ. ಇದನ್ನು ಖಂಡಿಸಿ ಸ್ಥಳೀಯ ಜನಪ್ರತಿನಿಧಿಗಳು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬೆಂಬಲಿಸಬೇಕು’ ಎಂದು ಹೇಳಿದರು.</p>.<p>ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಶರಣೇಗೌಡ ಬಯ್ಯಾಪುರ, ಶಾಸಕ ವೆಂಕಟರಾವ್ ನಾಡಗೌಡರ ಕಾಲಿಗೆ ಬಿದ್ದು ಆಶೀರ್ವಾದ ಕೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು (ರಾಯಚೂರು ಜಿಲ್ಲೆ): </strong>ರಾಯಚೂರು–ಕೊಪ್ಪಳ ವಿಧಾನ ಪರಿಷತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರಣೇಗೌಡ ಬಯ್ಯಾಪುರ ಅವರಿಗೆ ಜೆಡಿಎಸ್ ಬೆಂಬಲ ಘೋಷಿಸಿದೆ.</p>.<p>ಸೋಮವಾರ ನಡೆದ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ ಮತ್ತು ನಗರಸಭೆ ಸದಸ್ಯರ ಸಭೆಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಈ ಘೋಷಣೆ ಮಾಡಿದರು.</p>.<p>‘ಶರಣೇಗೌಡ ಬಯ್ಯಾಪುರ ಅವರು ಅತ್ಯಂತ ಸರಳ ವ್ಯಕ್ತಿಯಾಗಿದ್ದು, ಗ್ರಾಮ ಪಂಚಾಯಿತಿ ಮತ್ತು ನಗರಸಭೆ ಸದಸ್ಯರ ಸಮಸ್ಯೆಗಳ ಅರಿವು ಇದೆ. ಅವರನ್ನು ವಿಧಾನ ಪರಿಷತ್ಗೆ ಆಯ್ಕೆ ಮಾಡಬೇಕು’ ಎಂದು ಕೋರಿದರು.</p>.<p>‘ಶರಣೇಗೌಡ ಬಯ್ಯಾಪುರ ಅವರನ್ನು ಬೆಂಬಲಿಸಲು ಎಚ್.ಡಿ.ಕುಮಾರಸ್ವಾಮಿ ಅವರು ಅನುಮತಿ ನೀಡಿದ್ದಾರೆ. ಹೀಗಾಗಿ ಇವರಿಗೆ ಬೆಂಬಲ ನೀಡಬೇಕು‘ ಎಂದರು.</p>.<p>‘ಚುನಾವಣೆ ಪ್ರಕ್ರಿಯೆ ಆರಂಭಗೊಂಡು ಇಷ್ಟು ದಿನಗಳಾದರೂ ಈವರೆಗೆ ಬಿಜೆಪಿ ಅಭ್ಯರ್ಥಿ ಅಥವಾ ಆ ಪಕ್ಷದ ಮುಖಂಡರು ನಮ್ಮನ್ನು ಸಂಪರ್ಕಿಸಿಲ್ಲ. ನಮ್ಮ ಕಾರ್ಯಕರ್ತರಲ್ಲೇ ಒಡಕುಂಟು ಮಾಡಲು ಪ್ರಯತ್ನಿಸುತ್ತಿದ್ದಾರೆ. ಇದನ್ನು ಖಂಡಿಸಿ ಸ್ಥಳೀಯ ಜನಪ್ರತಿನಿಧಿಗಳು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬೆಂಬಲಿಸಬೇಕು’ ಎಂದು ಹೇಳಿದರು.</p>.<p>ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಶರಣೇಗೌಡ ಬಯ್ಯಾಪುರ, ಶಾಸಕ ವೆಂಕಟರಾವ್ ನಾಡಗೌಡರ ಕಾಲಿಗೆ ಬಿದ್ದು ಆಶೀರ್ವಾದ ಕೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>