‘ಭಾರತ್ ಜೋಡೊ’ ಯಾತ್ರೆಯ ಮುಂದುವರಿದ ಭಾಗವಾಗಿರುವ ಪಕ್ಷದ ಮುಂಬರುವ ‘ಹಾಥ್ ಸೆ ಹಾಥ್ ಜೋಡೊ’ ಅಭಿಯಾನದ ಅಂಗವಾಗಿ ಜನರನ್ನು ಉದ್ದೇಶಿಸಿ ಪತ್ರ ಬರೆದಿರುವ ರಾಹುಲ್, ‘ಇಂದು ನಮ್ಮ ಬಹುತ್ವಕ್ಕೂ ಅಪಾಯವಿದೆ. ವಿಭಜಕ ಶಕ್ತಿಗಳು ನಮ್ಮ ವೈವಿಧ್ಯತೆಯನ್ನು ನಮ್ಮ ವಿರುದ್ಧ ತಿರುಗಿಸಲು ಪ್ರಯತ್ನಿಸುತ್ತಿವೆ. ಯಾತ್ರೆಯ ನಂತರ, ಈ ಕೆಟ್ಟ ಅಜೆಂಡಾವು ತನ್ನ ಮಿತಿಗಳನ್ನು ಹೊಂದಿದೆ ಎಂಬುದು ನನಗೆ ಮನವರಿಕೆಯಾಗಿದೆ. ಇದು ಇನ್ನು ಮುಂದೆ ಮುಂದುವರಿಯಲು ಸಾಧ್ಯವಿಲ್ಲ’ ಎಂದಿದ್ದಾರೆ.