ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ, 'ಬಿಜೆಪಿ ಸರ್ಕಾರ ಮಂಡಿಸುತ್ತಿರುವ ಮಸೂದೆಯು ಜನರ ಬದುಕನ್ನು ಅಲ್ಲೋಲ ಕಲ್ಲೋಲ ಮಾಡಲಿದೆ. ಶಾಂತಿಯನ್ನು ಹಾಳು ಮಾಡಲಿದೆ. ಆದ್ದರಿಂದ ನಮ್ಮ ಪಕ್ಷ ಸಂಪೂರ್ಣವಾಗಿ ಮಸೂದೆಯನ್ನು ವಿರೋಧಿಸಲಿದೆ' ಎಂದು ತಿಳಿಸಿದ್ದಾರೆ.