<p><strong>ಬೆಂಗಳೂರು:</strong> ಬೆಂಗಳೂರು, ಮೈಸೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನಾಭರಣಗಳ ಮಳಿಗೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.</p>.<p>ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು.</p>.<p>ಮೈಸೂರು ಸಿಲ್ಕ್ಸ್, ಮೈಸೂರು ಸ್ಯಾಂಡಲ್ ಸೋಪ್ ಮತ್ತು ಕಾವೇರಿ ಹ್ಯಾಂಡ್ಲೂಮ್ ಮಾದರಿಯಲ್ಲಿ ಬ್ರ್ಯಾಂಡಿಂಗ್ ಮಾಡಿ ಅದೇ ಮಾದರಿಯಲ್ಲಿ ಆಭರಣಗಳ ಮಳಿಗೆ ತೆರೆಯಲಾಗುವುದು. ಸರ್ಕಾರವೇ ಮಳಿಗೆಗಳನ್ನು ನಿರ್ವಹಣೆ ಮಾಡಲಿದ್ದು, ಗ್ರಾಹಕರ ಬೇಡಿಕೆಗೆ ತಕ್ಕಂತೆ ಆಭರಣಗಳನ್ನು ತಯಾರಿಸಿಕೊಡಲಾಗುವುದು ಎಂದು ವಿವರಿಸಿದರು.</p>.<p>ರಾಜ್ಯದಲ್ಲಿ ಮಳಿಗೆಗಳ ಯಶಸ್ಸು ಆಧರಿಸಿ ಹೊರ ರಾಜ್ಯಗಳಲ್ಲೂ ಆಭರಣಗಳ ಮಳಿಗೆಗಳನ್ನು ಆರಂಭಿಸುವ ಯೋಜನೆ ಇದೆ ಎಂದರು.</p>.<p><strong>ಗಂಡಬೇರುಂಡ ಚಿನ್ನದ ನಾಣ್ಯ:</strong></p>.<p>ಮದುವೆ ಮತ್ತು ಇತರ ಸಮಾರಂಭಗಳಲ್ಲಿ ಬಂಧು–ಬಾಂಧವರು ಮತ್ತು ಮಿತ್ರರಿಗೆ ಉಡುಗೊರೆಯಾಗಿ ವಿತರಿಸಲು ಕರ್ನಾಟಕದ ಲಾಂಛನವಾದ ‘ಗಂಡಬೇರುಂಡ’ ಗುರುತಿನ ಚಿನ್ನದ ನಾಣ್ಯಗಳನ್ನು ಹೊರತರಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.</p>.<p>ರಾಜ್ಯದಲ್ಲಿ ಚಿನ್ನದ ಉತ್ಪಾದನೆ ದ್ವಿಗುಣಗೊಳಿಸಲು ಉದ್ದೇಶಿಸಲಾಗಿದೆ. ಈಗ ಹಟ್ಟಿ ಚಿನ್ನದ ಗಣಿಯಲ್ಲಿ 1,500 ರಿಂದ 1,800 ಕೆ.ಜಿ ಚಿನ್ನದ ಉತ್ಪಾದನೆ ಆಗುತ್ತಿದೆ. 2022 ರ ವೇಳೆಗೆ ಆ ಪ್ರಮಾಣವನ್ನು 5,000 ಕೆ.ಜಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು, ಮೈಸೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನಾಭರಣಗಳ ಮಳಿಗೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.</p>.<p>ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು.</p>.<p>ಮೈಸೂರು ಸಿಲ್ಕ್ಸ್, ಮೈಸೂರು ಸ್ಯಾಂಡಲ್ ಸೋಪ್ ಮತ್ತು ಕಾವೇರಿ ಹ್ಯಾಂಡ್ಲೂಮ್ ಮಾದರಿಯಲ್ಲಿ ಬ್ರ್ಯಾಂಡಿಂಗ್ ಮಾಡಿ ಅದೇ ಮಾದರಿಯಲ್ಲಿ ಆಭರಣಗಳ ಮಳಿಗೆ ತೆರೆಯಲಾಗುವುದು. ಸರ್ಕಾರವೇ ಮಳಿಗೆಗಳನ್ನು ನಿರ್ವಹಣೆ ಮಾಡಲಿದ್ದು, ಗ್ರಾಹಕರ ಬೇಡಿಕೆಗೆ ತಕ್ಕಂತೆ ಆಭರಣಗಳನ್ನು ತಯಾರಿಸಿಕೊಡಲಾಗುವುದು ಎಂದು ವಿವರಿಸಿದರು.</p>.<p>ರಾಜ್ಯದಲ್ಲಿ ಮಳಿಗೆಗಳ ಯಶಸ್ಸು ಆಧರಿಸಿ ಹೊರ ರಾಜ್ಯಗಳಲ್ಲೂ ಆಭರಣಗಳ ಮಳಿಗೆಗಳನ್ನು ಆರಂಭಿಸುವ ಯೋಜನೆ ಇದೆ ಎಂದರು.</p>.<p><strong>ಗಂಡಬೇರುಂಡ ಚಿನ್ನದ ನಾಣ್ಯ:</strong></p>.<p>ಮದುವೆ ಮತ್ತು ಇತರ ಸಮಾರಂಭಗಳಲ್ಲಿ ಬಂಧು–ಬಾಂಧವರು ಮತ್ತು ಮಿತ್ರರಿಗೆ ಉಡುಗೊರೆಯಾಗಿ ವಿತರಿಸಲು ಕರ್ನಾಟಕದ ಲಾಂಛನವಾದ ‘ಗಂಡಬೇರುಂಡ’ ಗುರುತಿನ ಚಿನ್ನದ ನಾಣ್ಯಗಳನ್ನು ಹೊರತರಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.</p>.<p>ರಾಜ್ಯದಲ್ಲಿ ಚಿನ್ನದ ಉತ್ಪಾದನೆ ದ್ವಿಗುಣಗೊಳಿಸಲು ಉದ್ದೇಶಿಸಲಾಗಿದೆ. ಈಗ ಹಟ್ಟಿ ಚಿನ್ನದ ಗಣಿಯಲ್ಲಿ 1,500 ರಿಂದ 1,800 ಕೆ.ಜಿ ಚಿನ್ನದ ಉತ್ಪಾದನೆ ಆಗುತ್ತಿದೆ. 2022 ರ ವೇಳೆಗೆ ಆ ಪ್ರಮಾಣವನ್ನು 5,000 ಕೆ.ಜಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>