ಈ ಕಾಯ್ದೆಯನ್ವಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ 30,034 ಶೌಚಾಲಯಗಳನ್ನು ನೈರ್ಮಲ್ಯ ಶೌಚಾಲಯಗಳನ್ನಾಗಿ ಪರಿವರ್ತಿಸಲಾಗಿದೆ. ರಾಜ್ಯದಲ್ಲಿ ಸಫಾಯಿ ಕರ್ಮಚಾರಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ. ಈ ನಿಗಮದ ಮೂಲಕ 3,210 ಸಫಾಯಿ ಕರ್ಮಚಾರಿಗಳನ್ನು ಗುರುತಿಸಿ ಪುನರ್ವಸತಿ ಕಲ್ಪಿಸಬೇಕು ಎಂದು ಕಾರಜೋಳ ನಿರ್ದೇಶನ ನೀಡಿದರು.