<p><strong>ಮೈಸೂರು:</strong> ‘ಕಾಂಗ್ರೆಸ್ ಜೊತೆ ಕೈ ಜೋಡಿಸಿ, ಎಚ್.ಡಿ.ಕುಮಾರಸ್ವಾಮಿ ಅವರ ಹೆಸರು ಕೆಟ್ಟಿತೆಂದು ನನಗೆ ಅನ್ನಿಸುವುದಿಲ್ಲ. ಎಚ್ಡಿಕೆ ಯಾವ ಅರ್ಥದಲ್ಲಿ ಈ ಮಾತು ಹೇಳಿದ್ದಾರೋ ಗೊತ್ತಿಲ್ಲ’ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಶುಕ್ರವಾರ ಇಲ್ಲಿ ಪ್ರತಿಕ್ರಿಯಿಸಿದರು.</p>.<p>‘ಈ ಹಿಂದೆ ಧರ್ಮಸಿಂಗ್ ಜೊತೆ ಸೇರಿ ಸಮ್ಮಿಶ್ರ ಸರ್ಕಾರ ಮಾಡುವಾಗ, ನಮ್ಮ ಅಭಿಪ್ರಾಯ ಕೇಳಿ<br />ದ್ದರು. ಈ ಬಾರಿ ಯಾವ ಶಾಸಕರ ಅಭಿಪ್ರಾಯವನ್ನೂ ಕೇಳಲಿಲ್ಲ.ಎಚ್.ಡಿ.ದೇವೇಗೌಡರು, ಕುಮಾರ<br />ಸ್ವಾಮಿ ಅವರೇ ತೀರ್ಮಾನ ಮಾಡಿದ್ದರು’ ಎಂದು ಪಕ್ಷದ ನಾಯಕತ್ವದ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.</p>.<p>‘ಅಧಿಕಾರದಲ್ಲಿದ್ದಾಗ ಒಳ್ಳೆಯ ಕೆಲಸವನ್ನೇ ಮಾಡಿರುವಾಗ, ಕೆಟ್ಟ ಹೆಸರು ಎಲ್ಲಿಂದ ಬರಲಿದೆ? ಈ ಬಾರಿ ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್-ಕಾಂಗ್ರೆಸ್ಸಚಿವರ ಮಧ್ಯೆ ಹೊಂದಾಣಿಕೆ ಇತ್ತು. ಆದರೆ, ಕುಮಾರಸ್ವಾಮಿ ಅವರಿಗೆ ಆಗಿರೋ ಕಹಿ ಅನುಭವ ನನಗೆ ಗೊತ್ತಿಲ್ಲ’ ಎಂದರು.</p>.<p>‘ಕೇಂದ್ರ–ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸುಭದ್ರವಾಗಿದೆ. ನಾಯಕತ್ವ ಬದಲಾವಣೆ ಆ ಪಕ್ಷದ ಹೈಕಮಾಂಡ್ಗೆ ಬಿಟ್ಟ ವಿಚಾರ’ ಎನ್ನುವ ಮೂಲಕ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ‘ಮುಖ್ಯಮಂತ್ರಿ ಬದಲಾವಣೆ’ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಕಾಂಗ್ರೆಸ್ ಜೊತೆ ಕೈ ಜೋಡಿಸಿ, ಎಚ್.ಡಿ.ಕುಮಾರಸ್ವಾಮಿ ಅವರ ಹೆಸರು ಕೆಟ್ಟಿತೆಂದು ನನಗೆ ಅನ್ನಿಸುವುದಿಲ್ಲ. ಎಚ್ಡಿಕೆ ಯಾವ ಅರ್ಥದಲ್ಲಿ ಈ ಮಾತು ಹೇಳಿದ್ದಾರೋ ಗೊತ್ತಿಲ್ಲ’ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಶುಕ್ರವಾರ ಇಲ್ಲಿ ಪ್ರತಿಕ್ರಿಯಿಸಿದರು.</p>.<p>‘ಈ ಹಿಂದೆ ಧರ್ಮಸಿಂಗ್ ಜೊತೆ ಸೇರಿ ಸಮ್ಮಿಶ್ರ ಸರ್ಕಾರ ಮಾಡುವಾಗ, ನಮ್ಮ ಅಭಿಪ್ರಾಯ ಕೇಳಿ<br />ದ್ದರು. ಈ ಬಾರಿ ಯಾವ ಶಾಸಕರ ಅಭಿಪ್ರಾಯವನ್ನೂ ಕೇಳಲಿಲ್ಲ.ಎಚ್.ಡಿ.ದೇವೇಗೌಡರು, ಕುಮಾರ<br />ಸ್ವಾಮಿ ಅವರೇ ತೀರ್ಮಾನ ಮಾಡಿದ್ದರು’ ಎಂದು ಪಕ್ಷದ ನಾಯಕತ್ವದ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.</p>.<p>‘ಅಧಿಕಾರದಲ್ಲಿದ್ದಾಗ ಒಳ್ಳೆಯ ಕೆಲಸವನ್ನೇ ಮಾಡಿರುವಾಗ, ಕೆಟ್ಟ ಹೆಸರು ಎಲ್ಲಿಂದ ಬರಲಿದೆ? ಈ ಬಾರಿ ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್-ಕಾಂಗ್ರೆಸ್ಸಚಿವರ ಮಧ್ಯೆ ಹೊಂದಾಣಿಕೆ ಇತ್ತು. ಆದರೆ, ಕುಮಾರಸ್ವಾಮಿ ಅವರಿಗೆ ಆಗಿರೋ ಕಹಿ ಅನುಭವ ನನಗೆ ಗೊತ್ತಿಲ್ಲ’ ಎಂದರು.</p>.<p>‘ಕೇಂದ್ರ–ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸುಭದ್ರವಾಗಿದೆ. ನಾಯಕತ್ವ ಬದಲಾವಣೆ ಆ ಪಕ್ಷದ ಹೈಕಮಾಂಡ್ಗೆ ಬಿಟ್ಟ ವಿಚಾರ’ ಎನ್ನುವ ಮೂಲಕ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ‘ಮುಖ್ಯಮಂತ್ರಿ ಬದಲಾವಣೆ’ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>