ಬೆಂಗಳೂರು: ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಬಾಗಲಕೋಟೆ ಜಿಲ್ಲೆ ಇಳಕಲ್ನ ಜಿ.ಪಿ.ಪಾಟೀಲ ಹಾಗೂಕಾರ್ಯಾಧ್ಯಕ್ಷರಾಗಿ ಕೊಪ್ಪಳದ ಸೋಮನಗೌಡ ಎಂ.ಪಾಟೀಲ ಅವರನ್ನುಆಯ್ಕೆ ಮಾಡಲಾಗಿದೆ.
ಬೆಂಗಳೂರಿನ ಸಂಘದ ಕಾರ್ಯಾಲಯದಲ್ಲಿಬುಧವಾರ ನಡೆದ ಕಾರ್ಯಕಾರಿ ಸಮಿತಿಯಲ್ಲಿ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ಪ್ರಕಟಣೆ ತಿಳಿಸಿದೆ.