ರಾಹುಲ್ ಗಾಂಧಿ ಅವರು ವಿದೇಶದಲ್ಲಿ ದೇಶ ವಿರೋಧಿ ಹೇಳಿಕೆ ನೀಡಿದ ನಂತರ ರಾಜ್ಯ ಮತ್ತು ದೇಶದಲ್ಲಿ ಅದಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ. ಚುನಾವಣೆ ಸಂದರ್ಭದಲ್ಲಿ ಅವರು ಬೋಗಸ್ ಘೋಷಣೆ ಮಾಡುತ್ತಿದ್ದಾರೆ. ಅವರದ್ದು ವಿಸಿಟಿಂಗ್ ಕಾರ್ಡ್ ಮಾತ್ರ, ಗ್ಯಾರಂಟಿ ಕಾರ್ಡ್ ಅಲ್ಲ. ರಾಜಸ್ಥಾನ ಮತ್ತು ಛತ್ತೀಸ್ಗಡದಲ್ಲಿ ನೀಡಿದ ಭರವಸೆಗಳನ್ನು ಅವರು ಈಡೇರಿಸಿಲ್ಲ. ಪ್ರತಿ ಮನೆಗೆ ₹1 ಸಾವಿರ ನೀಡುವುದಾಗಿ ಛತ್ತೀಸ್ಗಡ ಜನರಿಗೆ ನೀಡಿದ್ದ ಭರವಸೆಯನ್ನು ನಾಲ್ಕು ವರ್ಷ ಈಡೇರಿಸಿಲ್ಲ, ಈಗ ಚುನಾವಣೆ ಹತ್ತಿರ ಇರುವ ಸಂದರ್ಭದಲ್ಲಿ ನೀಡಲು ಮುಂದಾಗಿದ್ದಾರೆ ಎಂದರು.