‘ಮ್ಯಾಜಿಸ್ಟೀರಿಯಲ್ ತನಿಖೆಯಿಂದ ಏಕಪಕ್ಷೀಯ ವರದಿ ಬರುವ ಸಾಧ್ಯತೆ ಇದೆ. ಹಿಂಸಾಚಾರದಲ್ಲಿ ಗುಂಡು ಹಾರಿಸುವ ಬದಲಿಗೆ ಗುಂಪು ಚದುರಿಸಲು ಪೊಲೀಸರು ಲಾಠಿ ಪ್ರಹಾರ, ಜಲಪಿರಂಗಿ, ರಬ್ಬರ್ ಬುಲೆಟ್, ಅಶ್ರುವಾಯು ಬಳಸಬಹುದಿತ್ತು. ಗುಂಡು ಹಾರಿಸಿದ್ದರಿಂದ ಮೂವರು ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಅವರಿಗೆ ಬಿಎಸ್ಪಿ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ಪತ್ರ ಬರೆದಿದ್ದಾರೆ.