ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶ್ಲೇಷ ಬಲಿಪೂಜೆ ನೆರವೇರಿಸಿದ ನ್ಯಾಯಮೂರ್ತಿ ಅಬ್ದುಲ್ ನಜೀರ್

Last Updated 27 ಡಿಸೆಂಬರ್ 2021, 19:56 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ಭಾನುವಾರ ರಾತ್ರಿ ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಸೋಮವಾರ ಬೆಳಿಗ್ಗೆ ದೇವಸ್ಥಾನಕ್ಕೆ ಬಂದು ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಸೋಮವಾರವೂ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ ಮಾಡಿರುವ ಅವರು ಮಂಗಳವಾರ ಇಲ್ಲಿಂದ ಹೊರಡಲಿದ್ದು, ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಕ್ಷೇತ್ರಕ್ಕೆ ಬಂದಿದ್ದ ನ್ಯಾಯಮೂರ್ತಿ ಅವರಿಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಸ್ವಾಗತ ಕೋರಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT