ಸುಬ್ರಹ್ಮಣ್ಯ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ಭಾನುವಾರ ರಾತ್ರಿ ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಸೋಮವಾರ ಬೆಳಿಗ್ಗೆ ದೇವಸ್ಥಾನಕ್ಕೆ ಬಂದು ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಸೋಮವಾರವೂ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ ಮಾಡಿರುವ ಅವರು ಮಂಗಳವಾರ ಇಲ್ಲಿಂದ ಹೊರಡಲಿದ್ದು, ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಕ್ಷೇತ್ರಕ್ಕೆ ಬಂದಿದ್ದ ನ್ಯಾಯಮೂರ್ತಿ ಅವರಿಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಸ್ವಾಗತ ಕೋರಲಾಯಿತು.